ಕಾಸರಗೋಡು: ಅ.21 ರಂದು ನಡೆಯಲಿರುವ ಮಂಜೇಶ್ವರ ವಿಧಾನಸಭೆಯ ಉಪಚುನಾವಣೆಯಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು.
ಐದು ಕಡೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್ ಕೋನಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇನ್ನುಳಿದಂತೆ ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಎಸ್. ಸುರೇಶ್, ಎರ್ಣಾಕುಳಂ ಕ್ಷೇತ್ರದಲ್ಲಿ ಸಿ.ಜಿ. ರಾಜಗೋಪಾಲ್, ಅರೂರ್ ಕ್ಷೇತ್ರದಲ್ಲಿ ಕೆ.ಪಿ. ಪ್ರಕಾಶ್ ಬಾಬು ಅಭ್ಯರ್ಥಿಗಳಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೆ. ಸುರೇಂದ್ರನ್ ಪತ್ತನಂತಿಟ್ಟದಲ್ಲಿ ಮತ್ತು ಕೆ.ಪಿ. ಸುರೇಶ್ ಬಾಬು ಕೋಝಿಕೋಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೆ. ಸುರೇಂದ್ರನ್ ಕೇವಲ 89 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಅಂದು ನಷ್ಟವಾದ ಕ್ಷೇತ್ರವನ್ನು ಮರಳಿ ಪಡೆಯಲು ಈ ಬಾರಿ ರವೀಶ ತಂತ್ರಿ ಅವರನ್ನು ಪಕ್ಷ ಕಣಕ್ಕಿಳಿಸಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…