ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ.
ಮಂಡೆಕೋಲು ಗ್ರಾಮದ ಬೊಳುಗಲ್ಲು ಪ್ರದೇಶದಲ್ಲಿ ಅರಣ್ಯ ಇಲಾಖೆಯು ಆನೆ ತಡೆಗೆ ನಿರ್ಮಿಸಿದ ತಡೆ ಬೇಲಿ ಭೇದಿಸಿ ಬಂದ ಆನೆಗಳು ಶ್ರೀಶ ಶರ್ಮ ಅವರ ತೋಟಕ್ಕೆ ಹಾನಿ ಮಾಡಿದೆ. ಬಾಳೆ, ಅಡಿಕೆ, ತೆಂಗು ಗಿಡಗಳನ್ನು ಹಾನಿ ಮಾಡಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಆನೆಗಳು ಹಿಂಡು ದಾಳಿ ಮಾಡುವ ವೇಳೆ ಸಮೀಪದ ತೋಟದವರಿಗೆ ಮಾಹಿತಿ ನೀಡಲು ಈಗ ಮೊಬೈಲ್ ಸಹಿತ ಯಾವುದೇ ಸಂಪರ್ಕ ವ್ಯವಸ್ಥೆ ಇಲ್ಲದೆ ಇಲ್ಲಿ ಜನತೆ ಕಂಗಾಲಾಗಿದ್ದಾರೆ.
ಇದೀಗ ಆನೆ ಹಿಂಡಿನಲ್ಲಿ ಮರಿ ಆನೆ ಕೂಡಾ ಇದ್ದು ಅಪಾಯ ಇದೆ. ಮರಿ ಆನೆ ಇದ್ದಾಗ ಆನೆಗಳು ಹೆಚ್ಚಾಗಿ ಮನುಷ್ಯರ ಮೇಲೂ ದಾಳಿ ಮಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ಸಂಪರ್ಕ ವ್ಯವಸ್ಥೆಯೂ ಇಲ್ಲಿ ಸರಿಯಾಗಬೇಕಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…