ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ.
ಮಂಡೆಕೋಲು ಗ್ರಾಮದ ಬೊಳುಗಲ್ಲು ಪ್ರದೇಶದಲ್ಲಿ ಅರಣ್ಯ ಇಲಾಖೆಯು ಆನೆ ತಡೆಗೆ ನಿರ್ಮಿಸಿದ ತಡೆ ಬೇಲಿ ಭೇದಿಸಿ ಬಂದ ಆನೆಗಳು ಶ್ರೀಶ ಶರ್ಮ ಅವರ ತೋಟಕ್ಕೆ ಹಾನಿ ಮಾಡಿದೆ. ಬಾಳೆ, ಅಡಿಕೆ, ತೆಂಗು ಗಿಡಗಳನ್ನು ಹಾನಿ ಮಾಡಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಆನೆಗಳು ಹಿಂಡು ದಾಳಿ ಮಾಡುವ ವೇಳೆ ಸಮೀಪದ ತೋಟದವರಿಗೆ ಮಾಹಿತಿ ನೀಡಲು ಈಗ ಮೊಬೈಲ್ ಸಹಿತ ಯಾವುದೇ ಸಂಪರ್ಕ ವ್ಯವಸ್ಥೆ ಇಲ್ಲದೆ ಇಲ್ಲಿ ಜನತೆ ಕಂಗಾಲಾಗಿದ್ದಾರೆ.
ಇದೀಗ ಆನೆ ಹಿಂಡಿನಲ್ಲಿ ಮರಿ ಆನೆ ಕೂಡಾ ಇದ್ದು ಅಪಾಯ ಇದೆ. ಮರಿ ಆನೆ ಇದ್ದಾಗ ಆನೆಗಳು ಹೆಚ್ಚಾಗಿ ಮನುಷ್ಯರ ಮೇಲೂ ದಾಳಿ ಮಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ಸಂಪರ್ಕ ವ್ಯವಸ್ಥೆಯೂ ಇಲ್ಲಿ ಸರಿಯಾಗಬೇಕಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…