ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ.
ಮಂಡೆಕೋಲು ಗ್ರಾಮದ ಬೊಳುಗಲ್ಲು ಪ್ರದೇಶದಲ್ಲಿ ಅರಣ್ಯ ಇಲಾಖೆಯು ಆನೆ ತಡೆಗೆ ನಿರ್ಮಿಸಿದ ತಡೆ ಬೇಲಿ ಭೇದಿಸಿ ಬಂದ ಆನೆಗಳು ಶ್ರೀಶ ಶರ್ಮ ಅವರ ತೋಟಕ್ಕೆ ಹಾನಿ ಮಾಡಿದೆ. ಬಾಳೆ, ಅಡಿಕೆ, ತೆಂಗು ಗಿಡಗಳನ್ನು ಹಾನಿ ಮಾಡಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಆನೆಗಳು ಹಿಂಡು ದಾಳಿ ಮಾಡುವ ವೇಳೆ ಸಮೀಪದ ತೋಟದವರಿಗೆ ಮಾಹಿತಿ ನೀಡಲು ಈಗ ಮೊಬೈಲ್ ಸಹಿತ ಯಾವುದೇ ಸಂಪರ್ಕ ವ್ಯವಸ್ಥೆ ಇಲ್ಲದೆ ಇಲ್ಲಿ ಜನತೆ ಕಂಗಾಲಾಗಿದ್ದಾರೆ.
ಇದೀಗ ಆನೆ ಹಿಂಡಿನಲ್ಲಿ ಮರಿ ಆನೆ ಕೂಡಾ ಇದ್ದು ಅಪಾಯ ಇದೆ. ಮರಿ ಆನೆ ಇದ್ದಾಗ ಆನೆಗಳು ಹೆಚ್ಚಾಗಿ ಮನುಷ್ಯರ ಮೇಲೂ ದಾಳಿ ಮಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ಸಂಪರ್ಕ ವ್ಯವಸ್ಥೆಯೂ ಇಲ್ಲಿ ಸರಿಯಾಗಬೇಕಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…