ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ.
ಮಂಡೆಕೋಲು ಗ್ರಾಮದ ಬೊಳುಗಲ್ಲು ಪ್ರದೇಶದಲ್ಲಿ ಅರಣ್ಯ ಇಲಾಖೆಯು ಆನೆ ತಡೆಗೆ ನಿರ್ಮಿಸಿದ ತಡೆ ಬೇಲಿ ಭೇದಿಸಿ ಬಂದ ಆನೆಗಳು ಶ್ರೀಶ ಶರ್ಮ ಅವರ ತೋಟಕ್ಕೆ ಹಾನಿ ಮಾಡಿದೆ. ಬಾಳೆ, ಅಡಿಕೆ, ತೆಂಗು ಗಿಡಗಳನ್ನು ಹಾನಿ ಮಾಡಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಆನೆಗಳು ಹಿಂಡು ದಾಳಿ ಮಾಡುವ ವೇಳೆ ಸಮೀಪದ ತೋಟದವರಿಗೆ ಮಾಹಿತಿ ನೀಡಲು ಈಗ ಮೊಬೈಲ್ ಸಹಿತ ಯಾವುದೇ ಸಂಪರ್ಕ ವ್ಯವಸ್ಥೆ ಇಲ್ಲದೆ ಇಲ್ಲಿ ಜನತೆ ಕಂಗಾಲಾಗಿದ್ದಾರೆ.
ಇದೀಗ ಆನೆ ಹಿಂಡಿನಲ್ಲಿ ಮರಿ ಆನೆ ಕೂಡಾ ಇದ್ದು ಅಪಾಯ ಇದೆ. ಮರಿ ಆನೆ ಇದ್ದಾಗ ಆನೆಗಳು ಹೆಚ್ಚಾಗಿ ಮನುಷ್ಯರ ಮೇಲೂ ದಾಳಿ ಮಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ಸಂಪರ್ಕ ವ್ಯವಸ್ಥೆಯೂ ಇಲ್ಲಿ ಸರಿಯಾಗಬೇಕಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…