ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…