ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…