Advertisement

ಮಂಡೆಕೋಲು: ಬೊಳುಗಲ್ಲು ಪ್ರದೇಶಕ್ಕೆ ನೀರಿನ ಕೊರತೆ : ಒಣಗಿದ ತೋಟಗಳು , ಕುಡಿಯುವ ನೀರಿಗೂ ಹಾಹಾಕಾರ

Share

ಮಂಡೆಕೋಲು: ತಾಲೂಕಿನ ಮಂಡೆಕೋಲು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳುಗಲ್ಲು ಪ್ರದೇಶದಲ್ಲಿ ನೀರಿನ ಹಾಹಾಕಾರ ಎದ್ದಿದೆ. ಕೃಷಿಗೆ ನೀರಿಲ್ಲದೆ ಒಣಗಿದರೆ , ಕುಡಿಯಲು ನೀರಿಲ್ಲದ ಪರಿಸ್ಥಿತಿ ಉಂಟಾಗಿದೆ. ಇಲ್ಲಿನ ಮನೆಗಳ ಬಾವಿಗಳು, ತೋಟದ ಕೆರೆಗಳು ಬತ್ತಿ ಹೋಗಿವೆ. ಹನಿ-ಹನಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಈ ಪ್ರದೇಶದಲ್ಲಿ ಉಂಟಾಗಿದೆ. ಈ ಬಗ್ಗೆ ಪಂಚಾಯತ್ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಪ್ರತೀ ಬೇಸಿಗೆಕಾಲದಲ್ಲೂ ಬೊಳುಗಲ್ಲು ಪ್ರದೇಶದ ಜನರು ನೀರಿನ ಬರ ಎದುರಿಸುತ್ತಿದ್ದಾರೆ. ಗ್ರಾಮ ಪಂಚಾಯತ್‍ನ ವಾರ್ಡ್ ಸಭೆಯಲ್ಲಿ, ಗ್ರಾಮ ಸಭೆಯಲ್ಲಿ ಈ ಕುರಿತು ಜನರು ಒತ್ತಾಯಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೊಳುಗಲ್ಲು ಪ್ರದೇಶದಲ್ಲಿ 25 ಮನೆಗಳಿದ್ದು ಪ್ರತೀ ಮನೆಯವರು ನೀರಿಗಾಗಿ ಪರದಾಟ ನಡೆಸುವಂತಾಗಿದೆ. ಬೊಳುಗಲ್ಲು ಭಾಗಕ್ಕೆ ಪಂಚಾಯತ್ ಕುಡಿಯುವ ನೀರಿನ ಸಂಪರ್ಕ ಕೂಡ ಇಲ್ಲವಾಗಿದೆ. 1983 ನಂತರ ಇದೇ ಮೊದಲು ಇಷ್ಟೊಂದು ನೀರಿನ ಸಮಸ್ಯೆ ಈ ಪ್ರದೇಶದಲ್ಲಿ ಉಂಟಾಗಿದೆ. ಮಂಡೆಕೊಲು ಗ್ರಾಮದ ಬೊಳುಗಲ್ಲು,ಬೆಂಗತ್ತ ಮಲೆ ಚಾಕೊಟೆ,ಕನ್ಯಾನ,ತೋಟಪ್ಪಾಡಿ ಭಾಗದಲ್ಲಿ ಜಾಸ್ತಿ ಸಮಸ್ಯೆ ಆಗಿದೆ. ಈಗ 5 ಮನೆಗಳಲ್ಲಿ 1 ಮನೆಯಲ್ಲಿ ಮಾತ್ರ ಬಾವಿಯಲ್ಲಿ ನೀರು ಇದ್ದು ಉಳಿದೆಲ್ಲಾ ಕಡೆ ಬತ್ತಿದೆ.

ಗ್ರಾಮ ಪಂಚಾಯತ್‍ಗೆ ಬೊಳುಗಲ್ಲು ಪ್ರದೇಶದ ಜನರ ಪರವಾಗಿ ಮನವಿ ಸಲ್ಲಿಸಿದ ಸ್ಥಳೀಯ ನಿವಾಸಿ ಪ್ರಶಾಂತ್ ಬೊಳುಗಲ್ಲು ದಯಮಾಡಿ ನಮ್ಮ ಪ್ರದೇಶಕ್ಕೆ ನೀರು ಒದಗಿಸುವ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

” ಕಳೆದ 3 ವರ್ಷದಿಂದ ಪಂಚಾಯತ್ ವಾರ್ಡ್ ಸಭೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಅಂತ ಮನವಿ ಮಾಡುತ್ತಾ ಬಂದಿದ್ದೇನೆ.ಆದರೆ ಏನು ಉಪಯೋಗ ಆಗಿಲ್ಲ. 700 ಅಡಿಗಳ ವರೆಗೆ ಬೋರ್‍ವೆಲ್ ಕೊರೆದರೂ ನೀರಿಲ್ಲದ ಸ್ಥಿತಿ ಇದೆ. ನಾವೂ ಇರುವುದೇ ಕಾಡಂಚಿನಲ್ಲಿ.ಆದರೂ ಕುಡಿಯಲು ಸಹ ನೀರಿಲ್ಲ”  ಎಂದು ಮಂಡೆಕೋಲು ಗ್ರಾಮದ ಬೊಳುಗಲ್ಲು ನಿವಾಸಿ ಪ್ರಶಾಂತ್ ಬೊಳುಗಲ್ಲು “ಸುಳ್ಯ ನ್ಯೂಸ್.ಕಾಂ” ಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

12 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

17 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago