ಮಂಡೆಕೋಲು: ಬೊಳುಗಲ್ಲು ಪ್ರದೇಶಕ್ಕೆ ನೀರಿನ ಕೊರತೆ : ಒಣಗಿದ ತೋಟಗಳು , ಕುಡಿಯುವ ನೀರಿಗೂ ಹಾಹಾಕಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಡೆಕೋಲು: ತಾಲೂಕಿನ ಮಂಡೆಕೋಲು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳುಗಲ್ಲು ಪ್ರದೇಶದಲ್ಲಿ ನೀರಿನ ಹಾಹಾಕಾರ ಎದ್ದಿದೆ. ಕೃಷಿಗೆ ನೀರಿಲ್ಲದೆ ಒಣಗಿದರೆ , ಕುಡಿಯಲು ನೀರಿಲ್ಲದ ಪರಿಸ್ಥಿತಿ ಉಂಟಾಗಿದೆ. ಇಲ್ಲಿನ ಮನೆಗಳ ಬಾವಿಗಳು, ತೋಟದ ಕೆರೆಗಳು ಬತ್ತಿ ಹೋಗಿವೆ. ಹನಿ-ಹನಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಈ ಪ್ರದೇಶದಲ್ಲಿ ಉಂಟಾಗಿದೆ. ಈ ಬಗ್ಗೆ ಪಂಚಾಯತ್ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Advertisement

ಪ್ರತೀ ಬೇಸಿಗೆಕಾಲದಲ್ಲೂ ಬೊಳುಗಲ್ಲು ಪ್ರದೇಶದ ಜನರು ನೀರಿನ ಬರ ಎದುರಿಸುತ್ತಿದ್ದಾರೆ. ಗ್ರಾಮ ಪಂಚಾಯತ್‍ನ ವಾರ್ಡ್ ಸಭೆಯಲ್ಲಿ, ಗ್ರಾಮ ಸಭೆಯಲ್ಲಿ ಈ ಕುರಿತು ಜನರು ಒತ್ತಾಯಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೊಳುಗಲ್ಲು ಪ್ರದೇಶದಲ್ಲಿ 25 ಮನೆಗಳಿದ್ದು ಪ್ರತೀ ಮನೆಯವರು ನೀರಿಗಾಗಿ ಪರದಾಟ ನಡೆಸುವಂತಾಗಿದೆ. ಬೊಳುಗಲ್ಲು ಭಾಗಕ್ಕೆ ಪಂಚಾಯತ್ ಕುಡಿಯುವ ನೀರಿನ ಸಂಪರ್ಕ ಕೂಡ ಇಲ್ಲವಾಗಿದೆ. 1983 ನಂತರ ಇದೇ ಮೊದಲು ಇಷ್ಟೊಂದು ನೀರಿನ ಸಮಸ್ಯೆ ಈ ಪ್ರದೇಶದಲ್ಲಿ ಉಂಟಾಗಿದೆ. ಮಂಡೆಕೊಲು ಗ್ರಾಮದ ಬೊಳುಗಲ್ಲು,ಬೆಂಗತ್ತ ಮಲೆ ಚಾಕೊಟೆ,ಕನ್ಯಾನ,ತೋಟಪ್ಪಾಡಿ ಭಾಗದಲ್ಲಿ ಜಾಸ್ತಿ ಸಮಸ್ಯೆ ಆಗಿದೆ. ಈಗ 5 ಮನೆಗಳಲ್ಲಿ 1 ಮನೆಯಲ್ಲಿ ಮಾತ್ರ ಬಾವಿಯಲ್ಲಿ ನೀರು ಇದ್ದು ಉಳಿದೆಲ್ಲಾ ಕಡೆ ಬತ್ತಿದೆ.

ಗ್ರಾಮ ಪಂಚಾಯತ್‍ಗೆ ಬೊಳುಗಲ್ಲು ಪ್ರದೇಶದ ಜನರ ಪರವಾಗಿ ಮನವಿ ಸಲ್ಲಿಸಿದ ಸ್ಥಳೀಯ ನಿವಾಸಿ ಪ್ರಶಾಂತ್ ಬೊಳುಗಲ್ಲು ದಯಮಾಡಿ ನಮ್ಮ ಪ್ರದೇಶಕ್ಕೆ ನೀರು ಒದಗಿಸುವ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

” ಕಳೆದ 3 ವರ್ಷದಿಂದ ಪಂಚಾಯತ್ ವಾರ್ಡ್ ಸಭೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಅಂತ ಮನವಿ ಮಾಡುತ್ತಾ ಬಂದಿದ್ದೇನೆ.ಆದರೆ ಏನು ಉಪಯೋಗ ಆಗಿಲ್ಲ. 700 ಅಡಿಗಳ ವರೆಗೆ ಬೋರ್‍ವೆಲ್ ಕೊರೆದರೂ ನೀರಿಲ್ಲದ ಸ್ಥಿತಿ ಇದೆ. ನಾವೂ ಇರುವುದೇ ಕಾಡಂಚಿನಲ್ಲಿ.ಆದರೂ ಕುಡಿಯಲು ಸಹ ನೀರಿಲ್ಲ”  ಎಂದು ಮಂಡೆಕೋಲು ಗ್ರಾಮದ ಬೊಳುಗಲ್ಲು ನಿವಾಸಿ ಪ್ರಶಾಂತ್ ಬೊಳುಗಲ್ಲು “ಸುಳ್ಯ ನ್ಯೂಸ್.ಕಾಂ” ಗೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

3 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

6 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

12 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

13 hours ago