Advertisement

ಮಂಡೆಕೋಲು: ಬೊಳುಗಲ್ಲು ಪ್ರದೇಶಕ್ಕೆ ನೀರಿನ ಕೊರತೆ : ಒಣಗಿದ ತೋಟಗಳು , ಕುಡಿಯುವ ನೀರಿಗೂ ಹಾಹಾಕಾರ

Share

ಮಂಡೆಕೋಲು: ತಾಲೂಕಿನ ಮಂಡೆಕೋಲು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳುಗಲ್ಲು ಪ್ರದೇಶದಲ್ಲಿ ನೀರಿನ ಹಾಹಾಕಾರ ಎದ್ದಿದೆ. ಕೃಷಿಗೆ ನೀರಿಲ್ಲದೆ ಒಣಗಿದರೆ , ಕುಡಿಯಲು ನೀರಿಲ್ಲದ ಪರಿಸ್ಥಿತಿ ಉಂಟಾಗಿದೆ. ಇಲ್ಲಿನ ಮನೆಗಳ ಬಾವಿಗಳು, ತೋಟದ ಕೆರೆಗಳು ಬತ್ತಿ ಹೋಗಿವೆ. ಹನಿ-ಹನಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಈ ಪ್ರದೇಶದಲ್ಲಿ ಉಂಟಾಗಿದೆ. ಈ ಬಗ್ಗೆ ಪಂಚಾಯತ್ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Advertisement
Advertisement
Advertisement
Advertisement

ಪ್ರತೀ ಬೇಸಿಗೆಕಾಲದಲ್ಲೂ ಬೊಳುಗಲ್ಲು ಪ್ರದೇಶದ ಜನರು ನೀರಿನ ಬರ ಎದುರಿಸುತ್ತಿದ್ದಾರೆ. ಗ್ರಾಮ ಪಂಚಾಯತ್‍ನ ವಾರ್ಡ್ ಸಭೆಯಲ್ಲಿ, ಗ್ರಾಮ ಸಭೆಯಲ್ಲಿ ಈ ಕುರಿತು ಜನರು ಒತ್ತಾಯಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೊಳುಗಲ್ಲು ಪ್ರದೇಶದಲ್ಲಿ 25 ಮನೆಗಳಿದ್ದು ಪ್ರತೀ ಮನೆಯವರು ನೀರಿಗಾಗಿ ಪರದಾಟ ನಡೆಸುವಂತಾಗಿದೆ. ಬೊಳುಗಲ್ಲು ಭಾಗಕ್ಕೆ ಪಂಚಾಯತ್ ಕುಡಿಯುವ ನೀರಿನ ಸಂಪರ್ಕ ಕೂಡ ಇಲ್ಲವಾಗಿದೆ. 1983 ನಂತರ ಇದೇ ಮೊದಲು ಇಷ್ಟೊಂದು ನೀರಿನ ಸಮಸ್ಯೆ ಈ ಪ್ರದೇಶದಲ್ಲಿ ಉಂಟಾಗಿದೆ. ಮಂಡೆಕೊಲು ಗ್ರಾಮದ ಬೊಳುಗಲ್ಲು,ಬೆಂಗತ್ತ ಮಲೆ ಚಾಕೊಟೆ,ಕನ್ಯಾನ,ತೋಟಪ್ಪಾಡಿ ಭಾಗದಲ್ಲಿ ಜಾಸ್ತಿ ಸಮಸ್ಯೆ ಆಗಿದೆ. ಈಗ 5 ಮನೆಗಳಲ್ಲಿ 1 ಮನೆಯಲ್ಲಿ ಮಾತ್ರ ಬಾವಿಯಲ್ಲಿ ನೀರು ಇದ್ದು ಉಳಿದೆಲ್ಲಾ ಕಡೆ ಬತ್ತಿದೆ.

Advertisement

ಗ್ರಾಮ ಪಂಚಾಯತ್‍ಗೆ ಬೊಳುಗಲ್ಲು ಪ್ರದೇಶದ ಜನರ ಪರವಾಗಿ ಮನವಿ ಸಲ್ಲಿಸಿದ ಸ್ಥಳೀಯ ನಿವಾಸಿ ಪ್ರಶಾಂತ್ ಬೊಳುಗಲ್ಲು ದಯಮಾಡಿ ನಮ್ಮ ಪ್ರದೇಶಕ್ಕೆ ನೀರು ಒದಗಿಸುವ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

Advertisement

” ಕಳೆದ 3 ವರ್ಷದಿಂದ ಪಂಚಾಯತ್ ವಾರ್ಡ್ ಸಭೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಅಂತ ಮನವಿ ಮಾಡುತ್ತಾ ಬಂದಿದ್ದೇನೆ.ಆದರೆ ಏನು ಉಪಯೋಗ ಆಗಿಲ್ಲ. 700 ಅಡಿಗಳ ವರೆಗೆ ಬೋರ್‍ವೆಲ್ ಕೊರೆದರೂ ನೀರಿಲ್ಲದ ಸ್ಥಿತಿ ಇದೆ. ನಾವೂ ಇರುವುದೇ ಕಾಡಂಚಿನಲ್ಲಿ.ಆದರೂ ಕುಡಿಯಲು ಸಹ ನೀರಿಲ್ಲ”  ಎಂದು ಮಂಡೆಕೋಲು ಗ್ರಾಮದ ಬೊಳುಗಲ್ಲು ನಿವಾಸಿ ಪ್ರಶಾಂತ್ ಬೊಳುಗಲ್ಲು “ಸುಳ್ಯ ನ್ಯೂಸ್.ಕಾಂ” ಗೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

10 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

10 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

10 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

10 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

11 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

11 hours ago