Advertisement

ಮಂಡೆಕೋಲು: ಬೊಳುಗಲ್ಲು ಪ್ರದೇಶಕ್ಕೆ ನೀರಿನ ಕೊರತೆ : ಒಣಗಿದ ತೋಟಗಳು , ಕುಡಿಯುವ ನೀರಿಗೂ ಹಾಹಾಕಾರ

Share

ಮಂಡೆಕೋಲು: ತಾಲೂಕಿನ ಮಂಡೆಕೋಲು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳುಗಲ್ಲು ಪ್ರದೇಶದಲ್ಲಿ ನೀರಿನ ಹಾಹಾಕಾರ ಎದ್ದಿದೆ. ಕೃಷಿಗೆ ನೀರಿಲ್ಲದೆ ಒಣಗಿದರೆ , ಕುಡಿಯಲು ನೀರಿಲ್ಲದ ಪರಿಸ್ಥಿತಿ ಉಂಟಾಗಿದೆ. ಇಲ್ಲಿನ ಮನೆಗಳ ಬಾವಿಗಳು, ತೋಟದ ಕೆರೆಗಳು ಬತ್ತಿ ಹೋಗಿವೆ. ಹನಿ-ಹನಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಈ ಪ್ರದೇಶದಲ್ಲಿ ಉಂಟಾಗಿದೆ. ಈ ಬಗ್ಗೆ ಪಂಚಾಯತ್ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಪ್ರತೀ ಬೇಸಿಗೆಕಾಲದಲ್ಲೂ ಬೊಳುಗಲ್ಲು ಪ್ರದೇಶದ ಜನರು ನೀರಿನ ಬರ ಎದುರಿಸುತ್ತಿದ್ದಾರೆ. ಗ್ರಾಮ ಪಂಚಾಯತ್‍ನ ವಾರ್ಡ್ ಸಭೆಯಲ್ಲಿ, ಗ್ರಾಮ ಸಭೆಯಲ್ಲಿ ಈ ಕುರಿತು ಜನರು ಒತ್ತಾಯಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೊಳುಗಲ್ಲು ಪ್ರದೇಶದಲ್ಲಿ 25 ಮನೆಗಳಿದ್ದು ಪ್ರತೀ ಮನೆಯವರು ನೀರಿಗಾಗಿ ಪರದಾಟ ನಡೆಸುವಂತಾಗಿದೆ. ಬೊಳುಗಲ್ಲು ಭಾಗಕ್ಕೆ ಪಂಚಾಯತ್ ಕುಡಿಯುವ ನೀರಿನ ಸಂಪರ್ಕ ಕೂಡ ಇಲ್ಲವಾಗಿದೆ. 1983 ನಂತರ ಇದೇ ಮೊದಲು ಇಷ್ಟೊಂದು ನೀರಿನ ಸಮಸ್ಯೆ ಈ ಪ್ರದೇಶದಲ್ಲಿ ಉಂಟಾಗಿದೆ. ಮಂಡೆಕೊಲು ಗ್ರಾಮದ ಬೊಳುಗಲ್ಲು,ಬೆಂಗತ್ತ ಮಲೆ ಚಾಕೊಟೆ,ಕನ್ಯಾನ,ತೋಟಪ್ಪಾಡಿ ಭಾಗದಲ್ಲಿ ಜಾಸ್ತಿ ಸಮಸ್ಯೆ ಆಗಿದೆ. ಈಗ 5 ಮನೆಗಳಲ್ಲಿ 1 ಮನೆಯಲ್ಲಿ ಮಾತ್ರ ಬಾವಿಯಲ್ಲಿ ನೀರು ಇದ್ದು ಉಳಿದೆಲ್ಲಾ ಕಡೆ ಬತ್ತಿದೆ.

ಗ್ರಾಮ ಪಂಚಾಯತ್‍ಗೆ ಬೊಳುಗಲ್ಲು ಪ್ರದೇಶದ ಜನರ ಪರವಾಗಿ ಮನವಿ ಸಲ್ಲಿಸಿದ ಸ್ಥಳೀಯ ನಿವಾಸಿ ಪ್ರಶಾಂತ್ ಬೊಳುಗಲ್ಲು ದಯಮಾಡಿ ನಮ್ಮ ಪ್ರದೇಶಕ್ಕೆ ನೀರು ಒದಗಿಸುವ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

” ಕಳೆದ 3 ವರ್ಷದಿಂದ ಪಂಚಾಯತ್ ವಾರ್ಡ್ ಸಭೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಅಂತ ಮನವಿ ಮಾಡುತ್ತಾ ಬಂದಿದ್ದೇನೆ.ಆದರೆ ಏನು ಉಪಯೋಗ ಆಗಿಲ್ಲ. 700 ಅಡಿಗಳ ವರೆಗೆ ಬೋರ್‍ವೆಲ್ ಕೊರೆದರೂ ನೀರಿಲ್ಲದ ಸ್ಥಿತಿ ಇದೆ. ನಾವೂ ಇರುವುದೇ ಕಾಡಂಚಿನಲ್ಲಿ.ಆದರೂ ಕುಡಿಯಲು ಸಹ ನೀರಿಲ್ಲ”  ಎಂದು ಮಂಡೆಕೋಲು ಗ್ರಾಮದ ಬೊಳುಗಲ್ಲು ನಿವಾಸಿ ಪ್ರಶಾಂತ್ ಬೊಳುಗಲ್ಲು “ಸುಳ್ಯ ನ್ಯೂಸ್.ಕಾಂ” ಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

4 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

11 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

12 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

21 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

22 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago