Advertisement

ಮಂಡೆಕೋಲು: ಬೊಳುಗಲ್ಲು ಪ್ರದೇಶಕ್ಕೆ ನೀರಿನ ಕೊರತೆ : ಒಣಗಿದ ತೋಟಗಳು , ಕುಡಿಯುವ ನೀರಿಗೂ ಹಾಹಾಕಾರ

Share

ಮಂಡೆಕೋಲು: ತಾಲೂಕಿನ ಮಂಡೆಕೋಲು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳುಗಲ್ಲು ಪ್ರದೇಶದಲ್ಲಿ ನೀರಿನ ಹಾಹಾಕಾರ ಎದ್ದಿದೆ. ಕೃಷಿಗೆ ನೀರಿಲ್ಲದೆ ಒಣಗಿದರೆ , ಕುಡಿಯಲು ನೀರಿಲ್ಲದ ಪರಿಸ್ಥಿತಿ ಉಂಟಾಗಿದೆ. ಇಲ್ಲಿನ ಮನೆಗಳ ಬಾವಿಗಳು, ತೋಟದ ಕೆರೆಗಳು ಬತ್ತಿ ಹೋಗಿವೆ. ಹನಿ-ಹನಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಈ ಪ್ರದೇಶದಲ್ಲಿ ಉಂಟಾಗಿದೆ. ಈ ಬಗ್ಗೆ ಪಂಚಾಯತ್ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಪ್ರತೀ ಬೇಸಿಗೆಕಾಲದಲ್ಲೂ ಬೊಳುಗಲ್ಲು ಪ್ರದೇಶದ ಜನರು ನೀರಿನ ಬರ ಎದುರಿಸುತ್ತಿದ್ದಾರೆ. ಗ್ರಾಮ ಪಂಚಾಯತ್‍ನ ವಾರ್ಡ್ ಸಭೆಯಲ್ಲಿ, ಗ್ರಾಮ ಸಭೆಯಲ್ಲಿ ಈ ಕುರಿತು ಜನರು ಒತ್ತಾಯಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೊಳುಗಲ್ಲು ಪ್ರದೇಶದಲ್ಲಿ 25 ಮನೆಗಳಿದ್ದು ಪ್ರತೀ ಮನೆಯವರು ನೀರಿಗಾಗಿ ಪರದಾಟ ನಡೆಸುವಂತಾಗಿದೆ. ಬೊಳುಗಲ್ಲು ಭಾಗಕ್ಕೆ ಪಂಚಾಯತ್ ಕುಡಿಯುವ ನೀರಿನ ಸಂಪರ್ಕ ಕೂಡ ಇಲ್ಲವಾಗಿದೆ. 1983 ನಂತರ ಇದೇ ಮೊದಲು ಇಷ್ಟೊಂದು ನೀರಿನ ಸಮಸ್ಯೆ ಈ ಪ್ರದೇಶದಲ್ಲಿ ಉಂಟಾಗಿದೆ. ಮಂಡೆಕೊಲು ಗ್ರಾಮದ ಬೊಳುಗಲ್ಲು,ಬೆಂಗತ್ತ ಮಲೆ ಚಾಕೊಟೆ,ಕನ್ಯಾನ,ತೋಟಪ್ಪಾಡಿ ಭಾಗದಲ್ಲಿ ಜಾಸ್ತಿ ಸಮಸ್ಯೆ ಆಗಿದೆ. ಈಗ 5 ಮನೆಗಳಲ್ಲಿ 1 ಮನೆಯಲ್ಲಿ ಮಾತ್ರ ಬಾವಿಯಲ್ಲಿ ನೀರು ಇದ್ದು ಉಳಿದೆಲ್ಲಾ ಕಡೆ ಬತ್ತಿದೆ.

ಗ್ರಾಮ ಪಂಚಾಯತ್‍ಗೆ ಬೊಳುಗಲ್ಲು ಪ್ರದೇಶದ ಜನರ ಪರವಾಗಿ ಮನವಿ ಸಲ್ಲಿಸಿದ ಸ್ಥಳೀಯ ನಿವಾಸಿ ಪ್ರಶಾಂತ್ ಬೊಳುಗಲ್ಲು ದಯಮಾಡಿ ನಮ್ಮ ಪ್ರದೇಶಕ್ಕೆ ನೀರು ಒದಗಿಸುವ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

” ಕಳೆದ 3 ವರ್ಷದಿಂದ ಪಂಚಾಯತ್ ವಾರ್ಡ್ ಸಭೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಅಂತ ಮನವಿ ಮಾಡುತ್ತಾ ಬಂದಿದ್ದೇನೆ.ಆದರೆ ಏನು ಉಪಯೋಗ ಆಗಿಲ್ಲ. 700 ಅಡಿಗಳ ವರೆಗೆ ಬೋರ್‍ವೆಲ್ ಕೊರೆದರೂ ನೀರಿಲ್ಲದ ಸ್ಥಿತಿ ಇದೆ. ನಾವೂ ಇರುವುದೇ ಕಾಡಂಚಿನಲ್ಲಿ.ಆದರೂ ಕುಡಿಯಲು ಸಹ ನೀರಿಲ್ಲ”  ಎಂದು ಮಂಡೆಕೋಲು ಗ್ರಾಮದ ಬೊಳುಗಲ್ಲು ನಿವಾಸಿ ಪ್ರಶಾಂತ್ ಬೊಳುಗಲ್ಲು “ಸುಳ್ಯ ನ್ಯೂಸ್.ಕಾಂ” ಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

24 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

24 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago