ಮಂಡೆಕೋಲು ಸಹಕಾರಿ ಸಂಘದ ಚುನಾವಣೆ : ಎಲ್ಲಾ 12 ಕ್ಷೇತ್ರಗಳಿಗೂ ಅವಿರೋಧ ಆಯ್ಕೆ

January 21, 2020
7:52 PM

ಮಂಡೆಕೋಲು: ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಹನ್ನೆರಡು ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾಗುವ ಮೂಲಕ ಚುನಾವಣಾರಹಿತವಾಗಿ ನೂತನ ಆಡಳಿತ ಮಂಡಳಿಯ ಆಯ್ಕೆಯಾಗಿದೆ.

Advertisement
Advertisement

ಹಿಂದುಳಿದ ವರ್ಗಗಳ ಎರಡು ಕ್ಷೇತ್ರ, ಮಹಿಳಾ ಮೀಸಲು ಕ್ಷೇತ್ರ, ಪ.ಜಾತಿ ಹಾಗೂ ಪ.ಪಂಗಡ ಮೀಸಲು ಕ್ಷೇತ್ರ ಮತ್ತು ಸಾಲಗಾರ ರಹಿತ ಕ್ಷೇತ್ರಗಳ ಒಟ್ಟು ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆದರೆ ಸಾಲಗಾರರ ಸಾಮಾನ್ಯ ಕ್ಷೇತ್ರಗಳ ಒಟ್ಟು ಐದು ಸ್ಥಾನಗಳಿಗೆ ಒಟ್ಟು ಏಳು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದರು. ಆ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಉತ್ತಪ್ಪ ಗೌಡ ಹಾಗೂ ಅಬ್ದುಲ್ ಲತೀಫ್ ರವರು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದು ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವ ಮೂಲಕ ಚುನಾವಣೆ ಇಲ್ಲದೆ ಎಲ್ಲ ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾದಂತಾಗಿದೆ.

ಪಕ್ಷೇತರ ಅಭ್ಯರ್ಥಿ ಉತ್ತಪ್ಪ ಅವರ ಜೊತೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸುಬೋದ್ ಶೆಟ್ಟಿ ಮೇನಾಲ ಹಾಗೂ ಗ್ರಾಮದ ಪ್ರಮುಖ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲಾಯಿತು.

ಆಯ್ಕೆಗೊಂಡ ಹನ್ನೆರಡು ಸ್ಥಾನಗಳ ಅಭ್ಯರ್ಥಿಗಳ ಪೈಕಿ ಒಂದು ಮಹಿಳಾ ಮೀಸಲು ಕ್ಷೇತ್ರ ಹಾಗೂ ಒಂದು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡಿದ್ದರೆ ಉಳಿದ ಹತ್ತು ಸ್ಥಾನಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಚುನಾವಣಾಧಿಕಾರಿ ಶಿವಲಿಂಗಯ್ಯರವರು ಚುನಾಯಿತ ಅಭ್ಯರ್ಥಿಗಳನ್ನು ಘೋಷಿಸಿದರು. ಹಾಲಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಚುನಾಯಿತ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಕಾರಣಕರ್ತರಾದ ಎಲ್ಲರನ್ನೂ ಅಭಿನಂದಿಸಿದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಚಾಕೋಟೆ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ನೂತನವಾಗಿ ಚುನಾಯಿತರಾದ ಅಭ್ಯರ್ಥಿಗಳ ವಿವರ:

Advertisement

ಸಾಲಾಗಾರರ ಸಾಮಾನ್ಯ ಕ್ಷೇತ್ರ ಈಶ್ವರಚಂದ್ರ ಕೆ. ಆರ್ , ರಾಮಕೃಷ್ಣ ರೈ ಪಿ.ಜಿ, ಭಾಸ್ಕರ ಯಂ.ಪಿ, ಪದ್ಮನಾಭ ಚೌಟಾಜೆ, ಸುನಿಲ್ ಪಿ.ಕೆ,

ಹಿಂದುಳಿದ ವರ್ಗ ‘ಎ’ ಕ್ಷೇತ್ರ ಸುರೇಶ್ ಕಣೆಮರಡ್ಕ, ಚಂದ್ರಜಿತ್ ಮಾವಂಜಿ,

ಮಹಿಳಾ ಮೀಸಲು ಕ್ಷೇತ್ರ ಜಲಜಾ.ಡಿ, ಸರಸ್ವತಿ ಕೆ.ಪಿ

ಸಾಲಗಾರ ರಹಿತ ಕ್ಷೇತ್ರ ಭಾರತಿ ಯು.ಯಂ

ಪ.ಜಾತಿ ಮೀಸಲು ಕ್ಷೇತ್ರ ರವಿ. ಸಿ

Advertisement

ಪ.ಪಂಗಡ ಮೀಸಲು ಕ್ಷೇತ್ರ ಮೋನಪ್ಪ ನಾಯ್ಕ.ಬಿ

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group