ಸುದ್ದಿಗಳು

ಮಂಡೆಕೋಲು ಸಹಕಾರಿ ಸಂಘದ ಚುನಾವಣೆ : ಎಲ್ಲಾ 12 ಕ್ಷೇತ್ರಗಳಿಗೂ ಅವಿರೋಧ ಆಯ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಡೆಕೋಲು: ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಹನ್ನೆರಡು ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾಗುವ ಮೂಲಕ ಚುನಾವಣಾರಹಿತವಾಗಿ ನೂತನ ಆಡಳಿತ ಮಂಡಳಿಯ ಆಯ್ಕೆಯಾಗಿದೆ.

Advertisement

ಹಿಂದುಳಿದ ವರ್ಗಗಳ ಎರಡು ಕ್ಷೇತ್ರ, ಮಹಿಳಾ ಮೀಸಲು ಕ್ಷೇತ್ರ, ಪ.ಜಾತಿ ಹಾಗೂ ಪ.ಪಂಗಡ ಮೀಸಲು ಕ್ಷೇತ್ರ ಮತ್ತು ಸಾಲಗಾರ ರಹಿತ ಕ್ಷೇತ್ರಗಳ ಒಟ್ಟು ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆದರೆ ಸಾಲಗಾರರ ಸಾಮಾನ್ಯ ಕ್ಷೇತ್ರಗಳ ಒಟ್ಟು ಐದು ಸ್ಥಾನಗಳಿಗೆ ಒಟ್ಟು ಏಳು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದರು. ಆ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಉತ್ತಪ್ಪ ಗೌಡ ಹಾಗೂ ಅಬ್ದುಲ್ ಲತೀಫ್ ರವರು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದು ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವ ಮೂಲಕ ಚುನಾವಣೆ ಇಲ್ಲದೆ ಎಲ್ಲ ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾದಂತಾಗಿದೆ.

ಪಕ್ಷೇತರ ಅಭ್ಯರ್ಥಿ ಉತ್ತಪ್ಪ ಅವರ ಜೊತೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸುಬೋದ್ ಶೆಟ್ಟಿ ಮೇನಾಲ ಹಾಗೂ ಗ್ರಾಮದ ಪ್ರಮುಖ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲಾಯಿತು.

ಆಯ್ಕೆಗೊಂಡ ಹನ್ನೆರಡು ಸ್ಥಾನಗಳ ಅಭ್ಯರ್ಥಿಗಳ ಪೈಕಿ ಒಂದು ಮಹಿಳಾ ಮೀಸಲು ಕ್ಷೇತ್ರ ಹಾಗೂ ಒಂದು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡಿದ್ದರೆ ಉಳಿದ ಹತ್ತು ಸ್ಥಾನಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಚುನಾವಣಾಧಿಕಾರಿ ಶಿವಲಿಂಗಯ್ಯರವರು ಚುನಾಯಿತ ಅಭ್ಯರ್ಥಿಗಳನ್ನು ಘೋಷಿಸಿದರು. ಹಾಲಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಚುನಾಯಿತ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಕಾರಣಕರ್ತರಾದ ಎಲ್ಲರನ್ನೂ ಅಭಿನಂದಿಸಿದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಚಾಕೋಟೆ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ನೂತನವಾಗಿ ಚುನಾಯಿತರಾದ ಅಭ್ಯರ್ಥಿಗಳ ವಿವರ:

Advertisement

ಸಾಲಾಗಾರರ ಸಾಮಾನ್ಯ ಕ್ಷೇತ್ರ ಈಶ್ವರಚಂದ್ರ ಕೆ. ಆರ್ , ರಾಮಕೃಷ್ಣ ರೈ ಪಿ.ಜಿ, ಭಾಸ್ಕರ ಯಂ.ಪಿ, ಪದ್ಮನಾಭ ಚೌಟಾಜೆ, ಸುನಿಲ್ ಪಿ.ಕೆ,

ಹಿಂದುಳಿದ ವರ್ಗ ‘ಎ’ ಕ್ಷೇತ್ರ ಸುರೇಶ್ ಕಣೆಮರಡ್ಕ, ಚಂದ್ರಜಿತ್ ಮಾವಂಜಿ,

ಮಹಿಳಾ ಮೀಸಲು ಕ್ಷೇತ್ರ ಜಲಜಾ.ಡಿ, ಸರಸ್ವತಿ ಕೆ.ಪಿ

ಸಾಲಗಾರ ರಹಿತ ಕ್ಷೇತ್ರ ಭಾರತಿ ಯು.ಯಂ

ಪ.ಜಾತಿ ಮೀಸಲು ಕ್ಷೇತ್ರ ರವಿ. ಸಿ

Advertisement

ಪ.ಪಂಗಡ ಮೀಸಲು ಕ್ಷೇತ್ರ ಮೋನಪ್ಪ ನಾಯ್ಕ.ಬಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

4 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

7 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

13 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

13 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

14 hours ago