Advertisement
ಸುದ್ದಿಗಳು

ಮಂಡೆಕೋಲು ಸಹಕಾರಿ ಸಂಘದ ಚುನಾವಣೆ : ಎಲ್ಲಾ 12 ಕ್ಷೇತ್ರಗಳಿಗೂ ಅವಿರೋಧ ಆಯ್ಕೆ

Share

ಮಂಡೆಕೋಲು: ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಹನ್ನೆರಡು ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾಗುವ ಮೂಲಕ ಚುನಾವಣಾರಹಿತವಾಗಿ ನೂತನ ಆಡಳಿತ ಮಂಡಳಿಯ ಆಯ್ಕೆಯಾಗಿದೆ.

Advertisement
Advertisement

ಹಿಂದುಳಿದ ವರ್ಗಗಳ ಎರಡು ಕ್ಷೇತ್ರ, ಮಹಿಳಾ ಮೀಸಲು ಕ್ಷೇತ್ರ, ಪ.ಜಾತಿ ಹಾಗೂ ಪ.ಪಂಗಡ ಮೀಸಲು ಕ್ಷೇತ್ರ ಮತ್ತು ಸಾಲಗಾರ ರಹಿತ ಕ್ಷೇತ್ರಗಳ ಒಟ್ಟು ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆದರೆ ಸಾಲಗಾರರ ಸಾಮಾನ್ಯ ಕ್ಷೇತ್ರಗಳ ಒಟ್ಟು ಐದು ಸ್ಥಾನಗಳಿಗೆ ಒಟ್ಟು ಏಳು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದರು. ಆ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಉತ್ತಪ್ಪ ಗೌಡ ಹಾಗೂ ಅಬ್ದುಲ್ ಲತೀಫ್ ರವರು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದು ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವ ಮೂಲಕ ಚುನಾವಣೆ ಇಲ್ಲದೆ ಎಲ್ಲ ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾದಂತಾಗಿದೆ.

Advertisement

ಪಕ್ಷೇತರ ಅಭ್ಯರ್ಥಿ ಉತ್ತಪ್ಪ ಅವರ ಜೊತೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸುಬೋದ್ ಶೆಟ್ಟಿ ಮೇನಾಲ ಹಾಗೂ ಗ್ರಾಮದ ಪ್ರಮುಖ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲಾಯಿತು.

ಆಯ್ಕೆಗೊಂಡ ಹನ್ನೆರಡು ಸ್ಥಾನಗಳ ಅಭ್ಯರ್ಥಿಗಳ ಪೈಕಿ ಒಂದು ಮಹಿಳಾ ಮೀಸಲು ಕ್ಷೇತ್ರ ಹಾಗೂ ಒಂದು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡಿದ್ದರೆ ಉಳಿದ ಹತ್ತು ಸ್ಥಾನಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಚುನಾವಣಾಧಿಕಾರಿ ಶಿವಲಿಂಗಯ್ಯರವರು ಚುನಾಯಿತ ಅಭ್ಯರ್ಥಿಗಳನ್ನು ಘೋಷಿಸಿದರು. ಹಾಲಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಚುನಾಯಿತ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಕಾರಣಕರ್ತರಾದ ಎಲ್ಲರನ್ನೂ ಅಭಿನಂದಿಸಿದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಚಾಕೋಟೆ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Advertisement

ನೂತನವಾಗಿ ಚುನಾಯಿತರಾದ ಅಭ್ಯರ್ಥಿಗಳ ವಿವರ:

ಸಾಲಾಗಾರರ ಸಾಮಾನ್ಯ ಕ್ಷೇತ್ರ ಈಶ್ವರಚಂದ್ರ ಕೆ. ಆರ್ , ರಾಮಕೃಷ್ಣ ರೈ ಪಿ.ಜಿ, ಭಾಸ್ಕರ ಯಂ.ಪಿ, ಪದ್ಮನಾಭ ಚೌಟಾಜೆ, ಸುನಿಲ್ ಪಿ.ಕೆ,

Advertisement

ಹಿಂದುಳಿದ ವರ್ಗ ‘ಎ’ ಕ್ಷೇತ್ರ ಸುರೇಶ್ ಕಣೆಮರಡ್ಕ, ಚಂದ್ರಜಿತ್ ಮಾವಂಜಿ,

ಮಹಿಳಾ ಮೀಸಲು ಕ್ಷೇತ್ರ ಜಲಜಾ.ಡಿ, ಸರಸ್ವತಿ ಕೆ.ಪಿ

Advertisement

ಸಾಲಗಾರ ರಹಿತ ಕ್ಷೇತ್ರ ಭಾರತಿ ಯು.ಯಂ

ಪ.ಜಾತಿ ಮೀಸಲು ಕ್ಷೇತ್ರ ರವಿ. ಸಿ

Advertisement

ಪ.ಪಂಗಡ ಮೀಸಲು ಕ್ಷೇತ್ರ ಮೋನಪ್ಪ ನಾಯ್ಕ.ಬಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

18 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

20 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago