ಮಂಡೆಕೋಲು: ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಹನ್ನೆರಡು ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾಗುವ ಮೂಲಕ ಚುನಾವಣಾರಹಿತವಾಗಿ ನೂತನ ಆಡಳಿತ ಮಂಡಳಿಯ ಆಯ್ಕೆಯಾಗಿದೆ.
ಹಿಂದುಳಿದ ವರ್ಗಗಳ ಎರಡು ಕ್ಷೇತ್ರ, ಮಹಿಳಾ ಮೀಸಲು ಕ್ಷೇತ್ರ, ಪ.ಜಾತಿ ಹಾಗೂ ಪ.ಪಂಗಡ ಮೀಸಲು ಕ್ಷೇತ್ರ ಮತ್ತು ಸಾಲಗಾರ ರಹಿತ ಕ್ಷೇತ್ರಗಳ ಒಟ್ಟು ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆದರೆ ಸಾಲಗಾರರ ಸಾಮಾನ್ಯ ಕ್ಷೇತ್ರಗಳ ಒಟ್ಟು ಐದು ಸ್ಥಾನಗಳಿಗೆ ಒಟ್ಟು ಏಳು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದರು. ಆ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಉತ್ತಪ್ಪ ಗೌಡ ಹಾಗೂ ಅಬ್ದುಲ್ ಲತೀಫ್ ರವರು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದು ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವ ಮೂಲಕ ಚುನಾವಣೆ ಇಲ್ಲದೆ ಎಲ್ಲ ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾದಂತಾಗಿದೆ.
ಪಕ್ಷೇತರ ಅಭ್ಯರ್ಥಿ ಉತ್ತಪ್ಪ ಅವರ ಜೊತೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸುಬೋದ್ ಶೆಟ್ಟಿ ಮೇನಾಲ ಹಾಗೂ ಗ್ರಾಮದ ಪ್ರಮುಖ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲಾಯಿತು.
ಆಯ್ಕೆಗೊಂಡ ಹನ್ನೆರಡು ಸ್ಥಾನಗಳ ಅಭ್ಯರ್ಥಿಗಳ ಪೈಕಿ ಒಂದು ಮಹಿಳಾ ಮೀಸಲು ಕ್ಷೇತ್ರ ಹಾಗೂ ಒಂದು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡಿದ್ದರೆ ಉಳಿದ ಹತ್ತು ಸ್ಥಾನಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಚುನಾವಣಾಧಿಕಾರಿ ಶಿವಲಿಂಗಯ್ಯರವರು ಚುನಾಯಿತ ಅಭ್ಯರ್ಥಿಗಳನ್ನು ಘೋಷಿಸಿದರು. ಹಾಲಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಚುನಾಯಿತ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಕಾರಣಕರ್ತರಾದ ಎಲ್ಲರನ್ನೂ ಅಭಿನಂದಿಸಿದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಚಾಕೋಟೆ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ನೂತನವಾಗಿ ಚುನಾಯಿತರಾದ ಅಭ್ಯರ್ಥಿಗಳ ವಿವರ:
ಸಾಲಾಗಾರರ ಸಾಮಾನ್ಯ ಕ್ಷೇತ್ರ ಈಶ್ವರಚಂದ್ರ ಕೆ. ಆರ್ , ರಾಮಕೃಷ್ಣ ರೈ ಪಿ.ಜಿ, ಭಾಸ್ಕರ ಯಂ.ಪಿ, ಪದ್ಮನಾಭ ಚೌಟಾಜೆ, ಸುನಿಲ್ ಪಿ.ಕೆ,
ಹಿಂದುಳಿದ ವರ್ಗ ‘ಎ’ ಕ್ಷೇತ್ರ ಸುರೇಶ್ ಕಣೆಮರಡ್ಕ, ಚಂದ್ರಜಿತ್ ಮಾವಂಜಿ,
ಮಹಿಳಾ ಮೀಸಲು ಕ್ಷೇತ್ರ ಜಲಜಾ.ಡಿ, ಸರಸ್ವತಿ ಕೆ.ಪಿ
ಸಾಲಗಾರ ರಹಿತ ಕ್ಷೇತ್ರ ಭಾರತಿ ಯು.ಯಂ
ಪ.ಜಾತಿ ಮೀಸಲು ಕ್ಷೇತ್ರ ರವಿ. ಸಿ
ಪ.ಪಂಗಡ ಮೀಸಲು ಕ್ಷೇತ್ರ ಮೋನಪ್ಪ ನಾಯ್ಕ.ಬಿ
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…