Advertisement
ಸುದ್ದಿಗಳು

ಮಂಡೆಕೋಲು ಸಹಕಾರಿ ಸಂಘದ ಚುನಾವಣೆ : ಎಲ್ಲಾ 12 ಕ್ಷೇತ್ರಗಳಿಗೂ ಅವಿರೋಧ ಆಯ್ಕೆ

Share

ಮಂಡೆಕೋಲು: ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಹನ್ನೆರಡು ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾಗುವ ಮೂಲಕ ಚುನಾವಣಾರಹಿತವಾಗಿ ನೂತನ ಆಡಳಿತ ಮಂಡಳಿಯ ಆಯ್ಕೆಯಾಗಿದೆ.

ಹಿಂದುಳಿದ ವರ್ಗಗಳ ಎರಡು ಕ್ಷೇತ್ರ, ಮಹಿಳಾ ಮೀಸಲು ಕ್ಷೇತ್ರ, ಪ.ಜಾತಿ ಹಾಗೂ ಪ.ಪಂಗಡ ಮೀಸಲು ಕ್ಷೇತ್ರ ಮತ್ತು ಸಾಲಗಾರ ರಹಿತ ಕ್ಷೇತ್ರಗಳ ಒಟ್ಟು ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆದರೆ ಸಾಲಗಾರರ ಸಾಮಾನ್ಯ ಕ್ಷೇತ್ರಗಳ ಒಟ್ಟು ಐದು ಸ್ಥಾನಗಳಿಗೆ ಒಟ್ಟು ಏಳು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದರು. ಆ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಉತ್ತಪ್ಪ ಗೌಡ ಹಾಗೂ ಅಬ್ದುಲ್ ಲತೀಫ್ ರವರು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದು ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವ ಮೂಲಕ ಚುನಾವಣೆ ಇಲ್ಲದೆ ಎಲ್ಲ ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾದಂತಾಗಿದೆ.

ಪಕ್ಷೇತರ ಅಭ್ಯರ್ಥಿ ಉತ್ತಪ್ಪ ಅವರ ಜೊತೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸುಬೋದ್ ಶೆಟ್ಟಿ ಮೇನಾಲ ಹಾಗೂ ಗ್ರಾಮದ ಪ್ರಮುಖ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲಾಯಿತು.

ಆಯ್ಕೆಗೊಂಡ ಹನ್ನೆರಡು ಸ್ಥಾನಗಳ ಅಭ್ಯರ್ಥಿಗಳ ಪೈಕಿ ಒಂದು ಮಹಿಳಾ ಮೀಸಲು ಕ್ಷೇತ್ರ ಹಾಗೂ ಒಂದು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡಿದ್ದರೆ ಉಳಿದ ಹತ್ತು ಸ್ಥಾನಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಚುನಾವಣಾಧಿಕಾರಿ ಶಿವಲಿಂಗಯ್ಯರವರು ಚುನಾಯಿತ ಅಭ್ಯರ್ಥಿಗಳನ್ನು ಘೋಷಿಸಿದರು. ಹಾಲಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಚುನಾಯಿತ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಕಾರಣಕರ್ತರಾದ ಎಲ್ಲರನ್ನೂ ಅಭಿನಂದಿಸಿದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಚಾಕೋಟೆ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ನೂತನವಾಗಿ ಚುನಾಯಿತರಾದ ಅಭ್ಯರ್ಥಿಗಳ ವಿವರ:

ಸಾಲಾಗಾರರ ಸಾಮಾನ್ಯ ಕ್ಷೇತ್ರ ಈಶ್ವರಚಂದ್ರ ಕೆ. ಆರ್ , ರಾಮಕೃಷ್ಣ ರೈ ಪಿ.ಜಿ, ಭಾಸ್ಕರ ಯಂ.ಪಿ, ಪದ್ಮನಾಭ ಚೌಟಾಜೆ, ಸುನಿಲ್ ಪಿ.ಕೆ,

ಹಿಂದುಳಿದ ವರ್ಗ ‘ಎ’ ಕ್ಷೇತ್ರ ಸುರೇಶ್ ಕಣೆಮರಡ್ಕ, ಚಂದ್ರಜಿತ್ ಮಾವಂಜಿ,

ಮಹಿಳಾ ಮೀಸಲು ಕ್ಷೇತ್ರ ಜಲಜಾ.ಡಿ, ಸರಸ್ವತಿ ಕೆ.ಪಿ

ಸಾಲಗಾರ ರಹಿತ ಕ್ಷೇತ್ರ ಭಾರತಿ ಯು.ಯಂ

ಪ.ಜಾತಿ ಮೀಸಲು ಕ್ಷೇತ್ರ ರವಿ. ಸಿ

ಪ.ಪಂಗಡ ಮೀಸಲು ಕ್ಷೇತ್ರ ಮೋನಪ್ಪ ನಾಯ್ಕ.ಬಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

3 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

3 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

6 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

15 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

16 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

22 hours ago