ಯಕ್ಷಗಾನ : ಮಾತು-ಮಸೆತ

ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು, ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ವಿಶ್ವರೂಪ’)
ಪ್ರಸಂಗ : ವಿಶ್ವರೂಪಾಚಾರ್ಯ

Advertisement
Advertisement

(ಸಂದರ್ಭ : ಸ್ವರ್ಗದಲ್ಲಿ ಗುರುಪೀಠ ಶೂನ್ಯವಾದಾಗ ಆ ಸ್ಥಾನವನ್ನು ಅಲಂಕರಿಸಲು ದೇವೇಂದ್ರನು ಬಿನ್ನವಿಸುತ್ತಾನೆ)

“.. ಕಾಮ್ಯರೂಪವಾದಂತಹ ಯಜ್ಞದಿಂದ, ವಿಶ್ವಕರ್ಮನಾದಂತಹ ಯಜ್ಞೇಶ್ವರನ ಅನುಗ್ರಹದಿಂದ ಪಡೆದಂತಹ ಲೋಕಾಧಿಪತ್ಯಕ್ಕೆ ಭಾಗಿಯಾದವರಲ್ಲಿ ನಾನು ಮುಖ್ಯಸ್ಥನು. ‘ವಿಶ್ವಕರ್ಮ’ – ವಿಶ್ವನು ಯಾವನ ಕೃತಿಯಾಗಿದೆಯೋ ಆ ಅವನು ‘ವಿಶ್ವಕರ್ಮ’. ತತ್ವತಃ ನೋಡಿದರೆ ವಿಶ್ವಕ್ಕಿಂತ ಭಿನ್ನನಲ್ಲ ವಿಶ್ವಕರ್ಮ. ಉತ್ತಮ ಸಂಗೀತಗಾರನ ಸೃಷ್ಟಿ ಗಾನದ ನಾದದ ಅಲೆಗಳು. ಪ್ರತ್ಯೇಕವಾಗಿ ಶಬ್ದಪ್ರಮಾಣದಿಮದ ಹೇಳುತ್ತೇವೆ. ಹೊರತು ಸಂಗೀತಕ್ಕೆ ಭಿನ್ನವಾದ್ದಲ್ಲ ಅಲೆಗಳು. ನಾದತರಂಗ ಮಾತ್ರ ಹಾಡುವಂತಹ ಯಾವತ್ತೂ ಹಾಡುಗಾರನ ನಾದ, ಅವಿನಾಭಾವ. ಆದರೆ ವ್ಯಾವಹಾರಿಕವಾಗಿ ಹೇಗೆ ಅಂದರೆ ಪ್ರಪಂಚ ಬೇರೆ, ವಿಶ್ವಕರ್ಮ ಬೇರೆ. ಈ ವಿಶ್ವಕರ್ಮನದ್ದಾದಂತಹ ಮತ್ತೊಂದು ಸ್ವರೂಪಕ್ಕೆ ‘ವಿಶ್ವರೂಪ’ ಅಂತ ಹೇಳುತ್ತೇವೆ. ಈ ವಿಶ್ವಕ್ಕೆ ರೂಪವನ್ನು ಹೇಗೆ ಕೊಡುವುದು? ಅಂದರೆ ಭೌತಿಕವಾಗಿ ಐದು – ಪಂಚಭೂತ. ಆಮೇಲೆ ಮಾನಸಿಕ, ಬೌದ್ಧಿಕವಾಗಿ ಚಿಂತಿಸುವಾಗ ಅದಕ್ಕೆ ಮೂರು ಶಕ್ತಿಗಳು – ಇಚ್ಛಾ, ಕ್ರಿಯಾ, ಜ್ಞಾನ. ಹಾಗಾಗಿ ವಿಶ್ವಕರ್ಮನನ್ನು ಮೂರ್ತಿವತ್ತಾಗಿ ಚಿತ್ರಸಿದಾವಾಗ ಐದು ಮುಖ ವಿಶ್ವಕರ್ಮನಿಗೆ. ವಿಶ್ವರೂಪನಾದ ನನಗೆ ಮೂರು ಮುಖ. ತತ್ವತಃ ಒಂದೇ ಅಖಂಡ. ಒಂದಕ್ಕಿಂತ ಒಂದು ಭಿನ್ನವಾದುದಲ್ಲ. ಹೀಗೆ ಆತ್ಮಾನುಸಂಧಾನದಲ್ಲಿ ನಾನು ಅದೇ ಆಗಿ ಇದ್ದ ಕಾಲಕ್ಕೆ ನೀನು ಬಂದಿದ್ದಿ.

ವಿಧಿನಿಷೇಧದ ಕಟ್ಟುಪಾಡಿಗೆ ಒಳಪಡದೇ ಇದ್ದರೂ ಕೆಲವೊಮ್ಮೆ ನಾವು ವಿಧಿಯನ್ನೂ ನಿಷೇಧವನ್ನೂ ಪರಿಗ್ರಹಿಸುತ್ತೇನೆ. ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು. ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು. ಮರಿಗಪ್ಪೆ ನೀರಿನಲ್ಲಿ ಇರಬೇಕು. ಬಾಲ ಹೋದ ಮೇಲೆ ಕಪ್ಪೆಗೆ ನೆಲವೇನು? ಜಲವೇನು? ಸ್ವರ್ಗವೂ ನಮಗೆ ನಿಷಿದ್ಧವಲ್ಲ. ನರಕಕ್ಕೂ ಭಯಪಡುವವರಲ್ಲ. ಆದುದರಿಂದಲೇ ನಿನಗೆ ಗೊತ್ತಿರಬಹುದು, ಒಂದು ಮುಖದಲ್ಲಿ ಅಮೃತಪಾನ ಮಾಡುತ್ತೇನೆ. ಒಂದು ಮುಖದಿಂದ ಮದ್ಯಪಾನ ಮಾಡುತ್ತೇನೆ. ಮತ್ತೊಂದು ಮುಖದಿಂದ ಪ್ರಪಂಚವನ್ನು ನೋಡುತ್ತೇನೆ. …”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

28 minutes ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

49 minutes ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

1 hour ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

10 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

10 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

11 hours ago