ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ವಿಶ್ವರೂಪ’)
ಪ್ರಸಂಗ : ವಿಶ್ವರೂಪಾಚಾರ್ಯ
(ಸಂದರ್ಭ : ಸ್ವರ್ಗದಲ್ಲಿ ಗುರುಪೀಠ ಶೂನ್ಯವಾದಾಗ ಆ ಸ್ಥಾನವನ್ನು ಅಲಂಕರಿಸಲು ದೇವೇಂದ್ರನು ಬಿನ್ನವಿಸುತ್ತಾನೆ)
“.. ಕಾಮ್ಯರೂಪವಾದಂತಹ ಯಜ್ಞದಿಂದ, ವಿಶ್ವಕರ್ಮನಾದಂತಹ ಯಜ್ಞೇಶ್ವರನ ಅನುಗ್ರಹದಿಂದ ಪಡೆದಂತಹ ಲೋಕಾಧಿಪತ್ಯಕ್ಕೆ ಭಾಗಿಯಾದವರಲ್ಲಿ ನಾನು ಮುಖ್ಯಸ್ಥನು. ‘ವಿಶ್ವಕರ್ಮ’ – ವಿಶ್ವನು ಯಾವನ ಕೃತಿಯಾಗಿದೆಯೋ ಆ ಅವನು ‘ವಿಶ್ವಕರ್ಮ’. ತತ್ವತಃ ನೋಡಿದರೆ ವಿಶ್ವಕ್ಕಿಂತ ಭಿನ್ನನಲ್ಲ ವಿಶ್ವಕರ್ಮ. ಉತ್ತಮ ಸಂಗೀತಗಾರನ ಸೃಷ್ಟಿ ಗಾನದ ನಾದದ ಅಲೆಗಳು. ಪ್ರತ್ಯೇಕವಾಗಿ ಶಬ್ದಪ್ರಮಾಣದಿಮದ ಹೇಳುತ್ತೇವೆ. ಹೊರತು ಸಂಗೀತಕ್ಕೆ ಭಿನ್ನವಾದ್ದಲ್ಲ ಅಲೆಗಳು. ನಾದತರಂಗ ಮಾತ್ರ ಹಾಡುವಂತಹ ಯಾವತ್ತೂ ಹಾಡುಗಾರನ ನಾದ, ಅವಿನಾಭಾವ. ಆದರೆ ವ್ಯಾವಹಾರಿಕವಾಗಿ ಹೇಗೆ ಅಂದರೆ ಪ್ರಪಂಚ ಬೇರೆ, ವಿಶ್ವಕರ್ಮ ಬೇರೆ. ಈ ವಿಶ್ವಕರ್ಮನದ್ದಾದಂತಹ ಮತ್ತೊಂದು ಸ್ವರೂಪಕ್ಕೆ ‘ವಿಶ್ವರೂಪ’ ಅಂತ ಹೇಳುತ್ತೇವೆ. ಈ ವಿಶ್ವಕ್ಕೆ ರೂಪವನ್ನು ಹೇಗೆ ಕೊಡುವುದು? ಅಂದರೆ ಭೌತಿಕವಾಗಿ ಐದು – ಪಂಚಭೂತ. ಆಮೇಲೆ ಮಾನಸಿಕ, ಬೌದ್ಧಿಕವಾಗಿ ಚಿಂತಿಸುವಾಗ ಅದಕ್ಕೆ ಮೂರು ಶಕ್ತಿಗಳು – ಇಚ್ಛಾ, ಕ್ರಿಯಾ, ಜ್ಞಾನ. ಹಾಗಾಗಿ ವಿಶ್ವಕರ್ಮನನ್ನು ಮೂರ್ತಿವತ್ತಾಗಿ ಚಿತ್ರಸಿದಾವಾಗ ಐದು ಮುಖ ವಿಶ್ವಕರ್ಮನಿಗೆ. ವಿಶ್ವರೂಪನಾದ ನನಗೆ ಮೂರು ಮುಖ. ತತ್ವತಃ ಒಂದೇ ಅಖಂಡ. ಒಂದಕ್ಕಿಂತ ಒಂದು ಭಿನ್ನವಾದುದಲ್ಲ. ಹೀಗೆ ಆತ್ಮಾನುಸಂಧಾನದಲ್ಲಿ ನಾನು ಅದೇ ಆಗಿ ಇದ್ದ ಕಾಲಕ್ಕೆ ನೀನು ಬಂದಿದ್ದಿ.
ವಿಧಿನಿಷೇಧದ ಕಟ್ಟುಪಾಡಿಗೆ ಒಳಪಡದೇ ಇದ್ದರೂ ಕೆಲವೊಮ್ಮೆ ನಾವು ವಿಧಿಯನ್ನೂ ನಿಷೇಧವನ್ನೂ ಪರಿಗ್ರಹಿಸುತ್ತೇನೆ. ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು. ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು. ಮರಿಗಪ್ಪೆ ನೀರಿನಲ್ಲಿ ಇರಬೇಕು. ಬಾಲ ಹೋದ ಮೇಲೆ ಕಪ್ಪೆಗೆ ನೆಲವೇನು? ಜಲವೇನು? ಸ್ವರ್ಗವೂ ನಮಗೆ ನಿಷಿದ್ಧವಲ್ಲ. ನರಕಕ್ಕೂ ಭಯಪಡುವವರಲ್ಲ. ಆದುದರಿಂದಲೇ ನಿನಗೆ ಗೊತ್ತಿರಬಹುದು, ಒಂದು ಮುಖದಲ್ಲಿ ಅಮೃತಪಾನ ಮಾಡುತ್ತೇನೆ. ಒಂದು ಮುಖದಿಂದ ಮದ್ಯಪಾನ ಮಾಡುತ್ತೇನೆ. ಮತ್ತೊಂದು ಮುಖದಿಂದ ಪ್ರಪಂಚವನ್ನು ನೋಡುತ್ತೇನೆ. …”
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…