Advertisement
ಯಕ್ಷಗಾನ : ಮಾತು-ಮಸೆತ

ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು, ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು…..

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ವಿಶ್ವರೂಪ’)
ಪ್ರಸಂಗ : ವಿಶ್ವರೂಪಾಚಾರ್ಯ

Advertisement
Advertisement

(ಸಂದರ್ಭ : ಸ್ವರ್ಗದಲ್ಲಿ ಗುರುಪೀಠ ಶೂನ್ಯವಾದಾಗ ಆ ಸ್ಥಾನವನ್ನು ಅಲಂಕರಿಸಲು ದೇವೇಂದ್ರನು ಬಿನ್ನವಿಸುತ್ತಾನೆ)

Advertisement

“.. ಕಾಮ್ಯರೂಪವಾದಂತಹ ಯಜ್ಞದಿಂದ, ವಿಶ್ವಕರ್ಮನಾದಂತಹ ಯಜ್ಞೇಶ್ವರನ ಅನುಗ್ರಹದಿಂದ ಪಡೆದಂತಹ ಲೋಕಾಧಿಪತ್ಯಕ್ಕೆ ಭಾಗಿಯಾದವರಲ್ಲಿ ನಾನು ಮುಖ್ಯಸ್ಥನು. ‘ವಿಶ್ವಕರ್ಮ’ – ವಿಶ್ವನು ಯಾವನ ಕೃತಿಯಾಗಿದೆಯೋ ಆ ಅವನು ‘ವಿಶ್ವಕರ್ಮ’. ತತ್ವತಃ ನೋಡಿದರೆ ವಿಶ್ವಕ್ಕಿಂತ ಭಿನ್ನನಲ್ಲ ವಿಶ್ವಕರ್ಮ. ಉತ್ತಮ ಸಂಗೀತಗಾರನ ಸೃಷ್ಟಿ ಗಾನದ ನಾದದ ಅಲೆಗಳು. ಪ್ರತ್ಯೇಕವಾಗಿ ಶಬ್ದಪ್ರಮಾಣದಿಮದ ಹೇಳುತ್ತೇವೆ. ಹೊರತು ಸಂಗೀತಕ್ಕೆ ಭಿನ್ನವಾದ್ದಲ್ಲ ಅಲೆಗಳು. ನಾದತರಂಗ ಮಾತ್ರ ಹಾಡುವಂತಹ ಯಾವತ್ತೂ ಹಾಡುಗಾರನ ನಾದ, ಅವಿನಾಭಾವ. ಆದರೆ ವ್ಯಾವಹಾರಿಕವಾಗಿ ಹೇಗೆ ಅಂದರೆ ಪ್ರಪಂಚ ಬೇರೆ, ವಿಶ್ವಕರ್ಮ ಬೇರೆ. ಈ ವಿಶ್ವಕರ್ಮನದ್ದಾದಂತಹ ಮತ್ತೊಂದು ಸ್ವರೂಪಕ್ಕೆ ‘ವಿಶ್ವರೂಪ’ ಅಂತ ಹೇಳುತ್ತೇವೆ. ಈ ವಿಶ್ವಕ್ಕೆ ರೂಪವನ್ನು ಹೇಗೆ ಕೊಡುವುದು? ಅಂದರೆ ಭೌತಿಕವಾಗಿ ಐದು – ಪಂಚಭೂತ. ಆಮೇಲೆ ಮಾನಸಿಕ, ಬೌದ್ಧಿಕವಾಗಿ ಚಿಂತಿಸುವಾಗ ಅದಕ್ಕೆ ಮೂರು ಶಕ್ತಿಗಳು – ಇಚ್ಛಾ, ಕ್ರಿಯಾ, ಜ್ಞಾನ. ಹಾಗಾಗಿ ವಿಶ್ವಕರ್ಮನನ್ನು ಮೂರ್ತಿವತ್ತಾಗಿ ಚಿತ್ರಸಿದಾವಾಗ ಐದು ಮುಖ ವಿಶ್ವಕರ್ಮನಿಗೆ. ವಿಶ್ವರೂಪನಾದ ನನಗೆ ಮೂರು ಮುಖ. ತತ್ವತಃ ಒಂದೇ ಅಖಂಡ. ಒಂದಕ್ಕಿಂತ ಒಂದು ಭಿನ್ನವಾದುದಲ್ಲ. ಹೀಗೆ ಆತ್ಮಾನುಸಂಧಾನದಲ್ಲಿ ನಾನು ಅದೇ ಆಗಿ ಇದ್ದ ಕಾಲಕ್ಕೆ ನೀನು ಬಂದಿದ್ದಿ.

ವಿಧಿನಿಷೇಧದ ಕಟ್ಟುಪಾಡಿಗೆ ಒಳಪಡದೇ ಇದ್ದರೂ ಕೆಲವೊಮ್ಮೆ ನಾವು ವಿಧಿಯನ್ನೂ ನಿಷೇಧವನ್ನೂ ಪರಿಗ್ರಹಿಸುತ್ತೇನೆ. ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು. ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು. ಮರಿಗಪ್ಪೆ ನೀರಿನಲ್ಲಿ ಇರಬೇಕು. ಬಾಲ ಹೋದ ಮೇಲೆ ಕಪ್ಪೆಗೆ ನೆಲವೇನು? ಜಲವೇನು? ಸ್ವರ್ಗವೂ ನಮಗೆ ನಿಷಿದ್ಧವಲ್ಲ. ನರಕಕ್ಕೂ ಭಯಪಡುವವರಲ್ಲ. ಆದುದರಿಂದಲೇ ನಿನಗೆ ಗೊತ್ತಿರಬಹುದು, ಒಂದು ಮುಖದಲ್ಲಿ ಅಮೃತಪಾನ ಮಾಡುತ್ತೇನೆ. ಒಂದು ಮುಖದಿಂದ ಮದ್ಯಪಾನ ಮಾಡುತ್ತೇನೆ. ಮತ್ತೊಂದು ಮುಖದಿಂದ ಪ್ರಪಂಚವನ್ನು ನೋಡುತ್ತೇನೆ. …”

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ

Published by
ನಾ.ಕಾರಂತ ಪೆರಾಜೆ

Recent Posts

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

32 mins ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago