Advertisement
ಯಕ್ಷಗಾನ : ಮಾತು-ಮಸೆತ

ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು, ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು…..

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ವಿಶ್ವರೂಪ’)
ಪ್ರಸಂಗ : ವಿಶ್ವರೂಪಾಚಾರ್ಯ

(ಸಂದರ್ಭ : ಸ್ವರ್ಗದಲ್ಲಿ ಗುರುಪೀಠ ಶೂನ್ಯವಾದಾಗ ಆ ಸ್ಥಾನವನ್ನು ಅಲಂಕರಿಸಲು ದೇವೇಂದ್ರನು ಬಿನ್ನವಿಸುತ್ತಾನೆ)

“.. ಕಾಮ್ಯರೂಪವಾದಂತಹ ಯಜ್ಞದಿಂದ, ವಿಶ್ವಕರ್ಮನಾದಂತಹ ಯಜ್ಞೇಶ್ವರನ ಅನುಗ್ರಹದಿಂದ ಪಡೆದಂತಹ ಲೋಕಾಧಿಪತ್ಯಕ್ಕೆ ಭಾಗಿಯಾದವರಲ್ಲಿ ನಾನು ಮುಖ್ಯಸ್ಥನು. ‘ವಿಶ್ವಕರ್ಮ’ – ವಿಶ್ವನು ಯಾವನ ಕೃತಿಯಾಗಿದೆಯೋ ಆ ಅವನು ‘ವಿಶ್ವಕರ್ಮ’. ತತ್ವತಃ ನೋಡಿದರೆ ವಿಶ್ವಕ್ಕಿಂತ ಭಿನ್ನನಲ್ಲ ವಿಶ್ವಕರ್ಮ. ಉತ್ತಮ ಸಂಗೀತಗಾರನ ಸೃಷ್ಟಿ ಗಾನದ ನಾದದ ಅಲೆಗಳು. ಪ್ರತ್ಯೇಕವಾಗಿ ಶಬ್ದಪ್ರಮಾಣದಿಮದ ಹೇಳುತ್ತೇವೆ. ಹೊರತು ಸಂಗೀತಕ್ಕೆ ಭಿನ್ನವಾದ್ದಲ್ಲ ಅಲೆಗಳು. ನಾದತರಂಗ ಮಾತ್ರ ಹಾಡುವಂತಹ ಯಾವತ್ತೂ ಹಾಡುಗಾರನ ನಾದ, ಅವಿನಾಭಾವ. ಆದರೆ ವ್ಯಾವಹಾರಿಕವಾಗಿ ಹೇಗೆ ಅಂದರೆ ಪ್ರಪಂಚ ಬೇರೆ, ವಿಶ್ವಕರ್ಮ ಬೇರೆ. ಈ ವಿಶ್ವಕರ್ಮನದ್ದಾದಂತಹ ಮತ್ತೊಂದು ಸ್ವರೂಪಕ್ಕೆ ‘ವಿಶ್ವರೂಪ’ ಅಂತ ಹೇಳುತ್ತೇವೆ. ಈ ವಿಶ್ವಕ್ಕೆ ರೂಪವನ್ನು ಹೇಗೆ ಕೊಡುವುದು? ಅಂದರೆ ಭೌತಿಕವಾಗಿ ಐದು – ಪಂಚಭೂತ. ಆಮೇಲೆ ಮಾನಸಿಕ, ಬೌದ್ಧಿಕವಾಗಿ ಚಿಂತಿಸುವಾಗ ಅದಕ್ಕೆ ಮೂರು ಶಕ್ತಿಗಳು – ಇಚ್ಛಾ, ಕ್ರಿಯಾ, ಜ್ಞಾನ. ಹಾಗಾಗಿ ವಿಶ್ವಕರ್ಮನನ್ನು ಮೂರ್ತಿವತ್ತಾಗಿ ಚಿತ್ರಸಿದಾವಾಗ ಐದು ಮುಖ ವಿಶ್ವಕರ್ಮನಿಗೆ. ವಿಶ್ವರೂಪನಾದ ನನಗೆ ಮೂರು ಮುಖ. ತತ್ವತಃ ಒಂದೇ ಅಖಂಡ. ಒಂದಕ್ಕಿಂತ ಒಂದು ಭಿನ್ನವಾದುದಲ್ಲ. ಹೀಗೆ ಆತ್ಮಾನುಸಂಧಾನದಲ್ಲಿ ನಾನು ಅದೇ ಆಗಿ ಇದ್ದ ಕಾಲಕ್ಕೆ ನೀನು ಬಂದಿದ್ದಿ.

ವಿಧಿನಿಷೇಧದ ಕಟ್ಟುಪಾಡಿಗೆ ಒಳಪಡದೇ ಇದ್ದರೂ ಕೆಲವೊಮ್ಮೆ ನಾವು ವಿಧಿಯನ್ನೂ ನಿಷೇಧವನ್ನೂ ಪರಿಗ್ರಹಿಸುತ್ತೇನೆ. ಮಕ್ಕಳನ್ನು ಎತ್ತುವುದಕ್ಕಾಗಿ ತಾಯಿ ಬಾಗಬಹುದು. ಆದರೆ ವ್ಯಾಧಿರೂಪದಿಂದ ಬೆನ್ನು ಬಾಗಬಾರದು. ಮರಿಗಪ್ಪೆ ನೀರಿನಲ್ಲಿ ಇರಬೇಕು. ಬಾಲ ಹೋದ ಮೇಲೆ ಕಪ್ಪೆಗೆ ನೆಲವೇನು? ಜಲವೇನು? ಸ್ವರ್ಗವೂ ನಮಗೆ ನಿಷಿದ್ಧವಲ್ಲ. ನರಕಕ್ಕೂ ಭಯಪಡುವವರಲ್ಲ. ಆದುದರಿಂದಲೇ ನಿನಗೆ ಗೊತ್ತಿರಬಹುದು, ಒಂದು ಮುಖದಲ್ಲಿ ಅಮೃತಪಾನ ಮಾಡುತ್ತೇನೆ. ಒಂದು ಮುಖದಿಂದ ಮದ್ಯಪಾನ ಮಾಡುತ್ತೇನೆ. ಮತ್ತೊಂದು ಮುಖದಿಂದ ಪ್ರಪಂಚವನ್ನು ನೋಡುತ್ತೇನೆ. …”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 hour ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

20 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago