Advertisement
ಕಾರ್ಯಕ್ರಮಗಳು

ಮಕ್ಕಳಿಗೆ ವೈಜ್ಞಾನಿಕ ಜ್ಞಾನದ ಜೊತೆಗೆ ರಾಷ್ಟ್ರೀಯ ಮೌಲ್ಯವನ್ನೂ ಬೆಳೆಸಿ- ಡಾ.ತೇಜಸ್ವಿನಿ ಗೌಡ

Share

ಸುಳ್ಯ: ಮಕ್ಕಳಿಗೆ ವೈಜ್ಞಾನಿಕ ಮತ್ತು ಪ್ರಗತಿಪರ ಜ್ಞಾನವನ್ನು ನೀಡುವುದರ ಜೊತೆಗೆ ನಮ್ಮ ರಾಷ್ಟ್ರೀಯ ಮೌಲ್ಯ ಮತ್ತು ಪರಂಪರೆಯನ್ನು ತಿಳಿಸುವ ಕೆಲಸ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ ಹೇಳಿದ್ದಾರೆ.

ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಮ್ಮ ಆಶಯ ಮತ್ತು ಅಸ್ಮಿತೆಗೆ ಸೋಲಾಗದಂತೆ ನೋಕೊಂಡ ಕಾರಣ ನಮ್ಮ ಮೌಲ್ಯಗಳು ಉಳಿದಿದೆ. ಆದರೆ ಇಂದು ಜ್ಞಾನವನ್ನು ಎರವಲು ಪಡೆಯುವ ಕಾರಣ ನಮ್ಮ ಮಿದುಳು ಕ್ರಿಯಾಶೀಲವಾಗಿಲ್ಲ ಎಂದ ಅವರು ಮಕ್ಕಳ ಮನಸ್ಸನ್ನು ಕ್ರಿಯಾಶೀಲವಾಗಿ ಬೆಳೆಸಿ ಎಂದು ಕರೆ ನೀಡಿದರು.

ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಎಸ್.ಅಂಗಾರ ನಮ್ಮ ಕನ್ನಡ ಶಾಲೆಗಳನ್ನು ಉಳಿಸುವ ಜವಬ್ದಾರಿ ಪ್ರತಿಯೊಬ್ಬರ ಮೇಲೆ ಕೂಡ ಇದೆ. ಆದರೆ ಬ್ರಿಟೀಷ್ ಶಿಕ್ಷಣ ವ್ಯವಸ್ಥೆಗೆ ಮತ್ತು ಆಂಗ್ಲ ಭಾಷಾ ವ್ಯಾಮೋಹದಿಂದ ನಮ್ಮ ಗ್ರಾಮೀಣ ಶಾಲೆಗಳು ಸೊರಗಿದೆ. ಸುಳ್ಯ ತಾಲೂಕಿನಲ್ಲಿ ಮಾತ್ರ 30 ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುವ ಭೀತಿಯನ್ನು ಎದುರಿಸುತ್ತಿದೆ ಎಂದರು. ಶಿಕ್ಷಣವು ಬದುಕನ್ನು ಕಲಿಸುವಂತಿರಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ ಧರ್ಮ ಉಳಿದರೆ ಮಾತ್ರ ಸಮಾಜ, ದೇಶ ಉಳಿಯುತ್ತದೆ. ಆದುದರಿಂದ ಧರ್ಮ, ಸಂಸ್ಕೃತಿ ಮತ್ತು ಕುಟುಂಬ ಪದ್ಧತಿಯನ್ನು ಕಲಿಸುವ ಶಿಕ್ಷಣ ಇಂದಿನ ಅಗತ್ಯವಾಗಿದೆ. ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಧ್ಯೇಯ ಶಾಲೆಗಳಿಗಿರಬೇಕು ಎಂದರು.

ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಉಪೇಂದ್ರ ಕಾಮತ್ ಧ್ವಜಾರೋಹಣ ನೆರವೇರಿಸಿದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ತೀರ್ಥರಾಮ ಬಾಳಾಜೆ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ, ಕೆನರಾ ಬ್ಯಾಂಕ್ ಹಿರಿಯ ಪ್ರಬಂಧಕ ಮುರಾರ್ ಯಸ್.ಯಡ್ನಿಕ್ ಅತಿಥಿಗಳಾಗಿ ಭಾಗವಹಿಸಿದ್ದರು.

ಬೆಳ್ಳಿ ಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಮಧುಸೂಧನ ಕುಂಭಕ್ಕೋಡು, ಪ್ರಧಾನ ಕಾರ್ಯದರ್ಶಿಗಳಾದ ಜಯರಾಜ್ ಕುಕ್ಕೇಟಿ, ಸುಖೇಶ್ ಪದವು, ಜಯಪ್ರಸಾದ್ ಕಾರಿಂಜ, ಕೋಶಾಧ್ಯಕ್ಷ ಹೇಮಂತ್ ಕಾಮತ್, ಪ್ರಧಾನ ಸಂಯೋಜಕ ನ.ಸೀತಾರಾಮ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಗೋಪಾಲ ರಾವ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತ್ತಡ್ಕ ಸ್ವಾಗತಿಸಿದರು. ಶಾಲಾ ಸಂಚಾಲಕ ಕೆ.ಸುಧಾಕರ ಕಾಮತ್ ಪ್ರಸ್ತಾವನೆಗೈದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

8 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

8 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

21 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

22 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

22 hours ago