ಯಕ್ಷಗಾನ : ಮಾತು-ಮಸೆತ

ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು…….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

Advertisement

(ಶುಕ್ರನ ಮಗಳು ದೇವಯಾನಿಯು ಯಯಾತಿಯನ್ನು ತನಗೆ ವಿವಾಹ ಮಾಡಿಕೊಂಡುವಂತೆ ಪ್ರಾರ್ಥಿಸಿದಾಗ)

“ಕುಮಾರಿ… ನೀನು ಏನೂ ದಾರಿ ತಪ್ಪಿದ ಹಾಗಾಗಲಿಲ್ಲ. ನಮ್ಮ ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು ಮೂಲ ಕಾರಣವನ್ನು ತಮ್ಮಲ್ಲೇ ತಾವು ಕಂಡುಹುಡುಕಬೇಕು. ಹೇಳಿಕೇಳಿ ಈ ರಾಕ್ಷಸರ ಆಚಾರ್ಯ ಪೀಠವನ್ನು ಅಲಂಕರಿಸಿದ ಮೇಲೆ ನನ್ನಲ್ಲಿಯೂ ಕೂಡಾ ಆಹಾರ, ವಿಹಾರ, ವ್ಯವಹಾರ ಇದು ಕ್ಷಾತ್ರದಿಂದಲೇ ಮುಂಬರಿದಿದೆ. ಇತ್ತಿತ್ತ ನಾನು ಉಣ್ಣುವಲ್ಲಾಗಲೀ, ಕುಡಿಯುವುದಲ್ಲಾಗಲೀ ವಿಧಿನಿಷೇಧದ ಕಟ್ಟುಪಾಡಿಗೆ ಒಳಪಟ್ಟವನಾಗಿರಲಿಲ್ಲ. ಆದರೆ ಒಂದು ಕಾಲದಲ್ಲಿ ಜಾಗೃತನಾಗಿದ್ದೆ. ಮಗಳೇ… ನಿನ್ನಲ್ಲೂ ಒಂದು ವಿಧವಾದ ಸುಪ್ತವಾದ ಕ್ಷಾತ್ರ ಚಿತ್ತವೃತ್ತಿ ಇದೆ. ಇದಕ್ಕೆ ಪೂರಕವಾಗಿ ಅಂದು ಕಚನನ್ನು ನೀನು ಮೋಹಿಸಿ, ಅವನಿಂದ ಶಾಪಗೊಂಡೆ. ಎಷ್ಟೆಂದರೂ ಅವನು ಬ್ರಾಹ್ಮಣ ಪುತ್ರ. ಅಂತರಂಗ ಬಿಚ್ಚಿ ನಿನ್ನಲ್ಲಿ ಹೇಳುತ್ತೇನೆ. ನನ್ನಲ್ಲಿ ಇರುವುದಕ್ಕಿಂತಲೂ ಹೆಚ್ಚಿನ ಬ್ರಾಹ್ಮಣ್ಯ ಆ ಹುಡುಗನಲ್ಲಿತ್ತು. ಬೇರೊಬ್ಬರಾಗಿರುತ್ತಿದ್ದರೆ ನಿನ್ನ ಭಿಕ್ಷೆಗೆ ಒಲ್ಲೆ ಅನ್ನುತ್ತಿದ್ದರು. ಅಪ್ಪನಿಗಿಂತ ಇಮ್ಮಡಿ, ಮುಮ್ಮಡಿ ಯೋಗ್ಯತೆಯುಳ್ಳಂತಹ ಮಗ ಆ ಕಚ. ಬೃಹಸ್ಪತಿಯಾದರೂ… ಅದು ಬಿಡು… ಹಾಗಾದರೆ ಆ ತರುಣ ವಿದ್ಯೆಗೆ ಎಷ್ಟು ಮೌಲ್ಯವನ್ನು ಕಲ್ಪಿಸಿದ ನೋಡು. ಅದು ಕಳೆದು ಹೋಯಿತಲ್ಲಾ ಎಂದು ನೊಂದು ಶಪಿಸಿದ “ನಿನಗೆ ಕ್ಷತ್ರಿಯನೇ ಗಂಡನಾಗಲಿ” ಅಂತ. ಹೀಗೆ ಬೀಜದಲ್ಲಿದ್ದ ಕ್ಷತ್ರಿಯಗಂಧ, ಆಮೇಲೆ ನಾವು ಬೆಳೆಯುತ್ತಿರುವಾಗ ಆ ಕಚನ ನೊಂದ ನುಡಿ. ಅವನ ಬ್ರಾಹ್ಮಣ್ಯದ ಮಾತನ್ನು ತಳ್ಳಿಹಾಕುವುದಕ್ಕೆ ಬ್ರಹ್ಮನಿಗೂ ಸಾಧ್ಯವಿಲ್ಲ. ಆದ ಕಾರಣ ನಿನಗೆ ಕ್ಷತ್ರಿಯನೇ ಪತಿಯಾಗಬೇಕಾದುದು ಹೌದು..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

1 day ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

1 day ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago