Advertisement
ಯಕ್ಷಗಾನ : ಮಾತು-ಮಸೆತ

ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

(ಶುಕ್ರನ ಮಗಳು ದೇವಯಾನಿಯು ಯಯಾತಿಯನ್ನು ತನಗೆ ವಿವಾಹ ಮಾಡಿಕೊಂಡುವಂತೆ ಪ್ರಾರ್ಥಿಸಿದಾಗ)

“ಕುಮಾರಿ… ನೀನು ಏನೂ ದಾರಿ ತಪ್ಪಿದ ಹಾಗಾಗಲಿಲ್ಲ. ನಮ್ಮ ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು ಮೂಲ ಕಾರಣವನ್ನು ತಮ್ಮಲ್ಲೇ ತಾವು ಕಂಡುಹುಡುಕಬೇಕು. ಹೇಳಿಕೇಳಿ ಈ ರಾಕ್ಷಸರ ಆಚಾರ್ಯ ಪೀಠವನ್ನು ಅಲಂಕರಿಸಿದ ಮೇಲೆ ನನ್ನಲ್ಲಿಯೂ ಕೂಡಾ ಆಹಾರ, ವಿಹಾರ, ವ್ಯವಹಾರ ಇದು ಕ್ಷಾತ್ರದಿಂದಲೇ ಮುಂಬರಿದಿದೆ. ಇತ್ತಿತ್ತ ನಾನು ಉಣ್ಣುವಲ್ಲಾಗಲೀ, ಕುಡಿಯುವುದಲ್ಲಾಗಲೀ ವಿಧಿನಿಷೇಧದ ಕಟ್ಟುಪಾಡಿಗೆ ಒಳಪಟ್ಟವನಾಗಿರಲಿಲ್ಲ. ಆದರೆ ಒಂದು ಕಾಲದಲ್ಲಿ ಜಾಗೃತನಾಗಿದ್ದೆ. ಮಗಳೇ… ನಿನ್ನಲ್ಲೂ ಒಂದು ವಿಧವಾದ ಸುಪ್ತವಾದ ಕ್ಷಾತ್ರ ಚಿತ್ತವೃತ್ತಿ ಇದೆ. ಇದಕ್ಕೆ ಪೂರಕವಾಗಿ ಅಂದು ಕಚನನ್ನು ನೀನು ಮೋಹಿಸಿ, ಅವನಿಂದ ಶಾಪಗೊಂಡೆ. ಎಷ್ಟೆಂದರೂ ಅವನು ಬ್ರಾಹ್ಮಣ ಪುತ್ರ. ಅಂತರಂಗ ಬಿಚ್ಚಿ ನಿನ್ನಲ್ಲಿ ಹೇಳುತ್ತೇನೆ. ನನ್ನಲ್ಲಿ ಇರುವುದಕ್ಕಿಂತಲೂ ಹೆಚ್ಚಿನ ಬ್ರಾಹ್ಮಣ್ಯ ಆ ಹುಡುಗನಲ್ಲಿತ್ತು. ಬೇರೊಬ್ಬರಾಗಿರುತ್ತಿದ್ದರೆ ನಿನ್ನ ಭಿಕ್ಷೆಗೆ ಒಲ್ಲೆ ಅನ್ನುತ್ತಿದ್ದರು. ಅಪ್ಪನಿಗಿಂತ ಇಮ್ಮಡಿ, ಮುಮ್ಮಡಿ ಯೋಗ್ಯತೆಯುಳ್ಳಂತಹ ಮಗ ಆ ಕಚ. ಬೃಹಸ್ಪತಿಯಾದರೂ… ಅದು ಬಿಡು… ಹಾಗಾದರೆ ಆ ತರುಣ ವಿದ್ಯೆಗೆ ಎಷ್ಟು ಮೌಲ್ಯವನ್ನು ಕಲ್ಪಿಸಿದ ನೋಡು. ಅದು ಕಳೆದು ಹೋಯಿತಲ್ಲಾ ಎಂದು ನೊಂದು ಶಪಿಸಿದ “ನಿನಗೆ ಕ್ಷತ್ರಿಯನೇ ಗಂಡನಾಗಲಿ” ಅಂತ. ಹೀಗೆ ಬೀಜದಲ್ಲಿದ್ದ ಕ್ಷತ್ರಿಯಗಂಧ, ಆಮೇಲೆ ನಾವು ಬೆಳೆಯುತ್ತಿರುವಾಗ ಆ ಕಚನ ನೊಂದ ನುಡಿ. ಅವನ ಬ್ರಾಹ್ಮಣ್ಯದ ಮಾತನ್ನು ತಳ್ಳಿಹಾಕುವುದಕ್ಕೆ ಬ್ರಹ್ಮನಿಗೂ ಸಾಧ್ಯವಿಲ್ಲ. ಆದ ಕಾರಣ ನಿನಗೆ ಕ್ಷತ್ರಿಯನೇ ಪತಿಯಾಗಬೇಕಾದುದು ಹೌದು..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

23 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

24 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago