Advertisement
ಯಕ್ಷಗಾನ : ಮಾತು-ಮಸೆತ

ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

(ಶುಕ್ರನ ಮಗಳು ದೇವಯಾನಿಯು ಯಯಾತಿಯನ್ನು ತನಗೆ ವಿವಾಹ ಮಾಡಿಕೊಂಡುವಂತೆ ಪ್ರಾರ್ಥಿಸಿದಾಗ)

Advertisement

“ಕುಮಾರಿ… ನೀನು ಏನೂ ದಾರಿ ತಪ್ಪಿದ ಹಾಗಾಗಲಿಲ್ಲ. ನಮ್ಮ ಮಕ್ಕಳೆಲ್ಲಾ ಯಾಕೆ ಈ ರೀತಿಯಾಗಿ ವ್ಯವಹರಿಸುತ್ತಾರೆ ಎಂದು ಹಿರಿಯರು ಪ್ರಶ್ನಿಸುವುದಕ್ಕಿಂತ ಮೊದಲು ಮೂಲ ಕಾರಣವನ್ನು ತಮ್ಮಲ್ಲೇ ತಾವು ಕಂಡುಹುಡುಕಬೇಕು. ಹೇಳಿಕೇಳಿ ಈ ರಾಕ್ಷಸರ ಆಚಾರ್ಯ ಪೀಠವನ್ನು ಅಲಂಕರಿಸಿದ ಮೇಲೆ ನನ್ನಲ್ಲಿಯೂ ಕೂಡಾ ಆಹಾರ, ವಿಹಾರ, ವ್ಯವಹಾರ ಇದು ಕ್ಷಾತ್ರದಿಂದಲೇ ಮುಂಬರಿದಿದೆ. ಇತ್ತಿತ್ತ ನಾನು ಉಣ್ಣುವಲ್ಲಾಗಲೀ, ಕುಡಿಯುವುದಲ್ಲಾಗಲೀ ವಿಧಿನಿಷೇಧದ ಕಟ್ಟುಪಾಡಿಗೆ ಒಳಪಟ್ಟವನಾಗಿರಲಿಲ್ಲ. ಆದರೆ ಒಂದು ಕಾಲದಲ್ಲಿ ಜಾಗೃತನಾಗಿದ್ದೆ. ಮಗಳೇ… ನಿನ್ನಲ್ಲೂ ಒಂದು ವಿಧವಾದ ಸುಪ್ತವಾದ ಕ್ಷಾತ್ರ ಚಿತ್ತವೃತ್ತಿ ಇದೆ. ಇದಕ್ಕೆ ಪೂರಕವಾಗಿ ಅಂದು ಕಚನನ್ನು ನೀನು ಮೋಹಿಸಿ, ಅವನಿಂದ ಶಾಪಗೊಂಡೆ. ಎಷ್ಟೆಂದರೂ ಅವನು ಬ್ರಾಹ್ಮಣ ಪುತ್ರ. ಅಂತರಂಗ ಬಿಚ್ಚಿ ನಿನ್ನಲ್ಲಿ ಹೇಳುತ್ತೇನೆ. ನನ್ನಲ್ಲಿ ಇರುವುದಕ್ಕಿಂತಲೂ ಹೆಚ್ಚಿನ ಬ್ರಾಹ್ಮಣ್ಯ ಆ ಹುಡುಗನಲ್ಲಿತ್ತು. ಬೇರೊಬ್ಬರಾಗಿರುತ್ತಿದ್ದರೆ ನಿನ್ನ ಭಿಕ್ಷೆಗೆ ಒಲ್ಲೆ ಅನ್ನುತ್ತಿದ್ದರು. ಅಪ್ಪನಿಗಿಂತ ಇಮ್ಮಡಿ, ಮುಮ್ಮಡಿ ಯೋಗ್ಯತೆಯುಳ್ಳಂತಹ ಮಗ ಆ ಕಚ. ಬೃಹಸ್ಪತಿಯಾದರೂ… ಅದು ಬಿಡು… ಹಾಗಾದರೆ ಆ ತರುಣ ವಿದ್ಯೆಗೆ ಎಷ್ಟು ಮೌಲ್ಯವನ್ನು ಕಲ್ಪಿಸಿದ ನೋಡು. ಅದು ಕಳೆದು ಹೋಯಿತಲ್ಲಾ ಎಂದು ನೊಂದು ಶಪಿಸಿದ “ನಿನಗೆ ಕ್ಷತ್ರಿಯನೇ ಗಂಡನಾಗಲಿ” ಅಂತ. ಹೀಗೆ ಬೀಜದಲ್ಲಿದ್ದ ಕ್ಷತ್ರಿಯಗಂಧ, ಆಮೇಲೆ ನಾವು ಬೆಳೆಯುತ್ತಿರುವಾಗ ಆ ಕಚನ ನೊಂದ ನುಡಿ. ಅವನ ಬ್ರಾಹ್ಮಣ್ಯದ ಮಾತನ್ನು ತಳ್ಳಿಹಾಕುವುದಕ್ಕೆ ಬ್ರಹ್ಮನಿಗೂ ಸಾಧ್ಯವಿಲ್ಲ. ಆದ ಕಾರಣ ನಿನಗೆ ಕ್ಷತ್ರಿಯನೇ ಪತಿಯಾಗಬೇಕಾದುದು ಹೌದು..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

15 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

17 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

24 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago