ಬೆಳ್ಳಾರೆ: ಮಕ್ಕಳ ಒಳಗೆ ಅನೇಕ ಪ್ರತಿಭೆಗಳಿರುತ್ತದೆ. ಅದನ್ನು ಪ್ರಸ್ತುತಪಡಿಸುವಿಕೆಗೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ. ಸೋಲು ಗೆಲುವುಗಳನ್ನು ಮಕ್ಕಳು ಸಮಾನವಾಗಿ ಪರಿಗಣಿಸಿ ಪರಿಪಕ್ವವಾಗಬೇಕು ಎಂದು ತಾಲೂಕು ಶಿಕ್ಷಣ ಸಂಯೋಜಕ ವಸಂತ್ ಏನೆಕಲ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸಮಗ್ರ ಶಿಕ್ಷಣ, ತಾಲೂಕು ಶಿಕ್ಷಣ ಇಲಾಖೆ ಆಯೋಜನೆಯೊಂದಿಗೆ ಶುಕ್ರವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರಸ್ತಾವಿಸಿ ಮಾತನಾಡಿದರು. ಮುಖ್ಯ ಅತಿಥಿ ಕಳಂಜ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಅರ್ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗಂಗಾಧರ್ ತೋಟದಮೂಲೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ ಸವಿತಾ, ತಾಲೂಕು ಶಿಕ್ಷಕರ ಸಂಘದ ಸದಸ್ಯೆ ಹಾಗು ಪೆರುವಾಜೆ ಸಹಿಪ್ರಾ ಶಾಲಾ ಮುಖ್ಯೋಪಾಧ್ಯಾಯಿನಿ ತುಳಸಿ, ಎಸ್ಡಿಎಂಸಿ ಉಪಾಧ್ಯಕ್ಷೆ ಗೀತಾ ಉಪಸ್ಥತರಿದ್ದರು.
ಮುಖ್ಯಶಿಕ್ಷಕಿ ಮೋಹಿನಿ ಎ.ಕೆ ಸ್ವಾಗತಿಸಿ, ಹಿರಿಯ ಶಿಕ್ಷಕಿ ರೋಹಿಣಿ ವಂದಿಸಿದರು. ಶಿಕ್ಷಕಿ ರಾಣಿ ಕೆ.ಪಿ ಕಾರ್ಯಕ್ರಮ ನಿರೂಪಿಸಿದರು. ಒಟ್ಟು ಹನ್ನೆರಡು ಶಾಲೆಗಳು ಭಾಗವಹಿಸಿದ್ದು, ಇಪ್ಪತ್ತೈದು ಸ್ಪರ್ಧೆಗಳು ನಡೆಯಿತು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…