ಬೆಳ್ಳಾರೆ: ಮಕ್ಕಳ ಒಳಗೆ ಅನೇಕ ಪ್ರತಿಭೆಗಳಿರುತ್ತದೆ. ಅದನ್ನು ಪ್ರಸ್ತುತಪಡಿಸುವಿಕೆಗೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ. ಸೋಲು ಗೆಲುವುಗಳನ್ನು ಮಕ್ಕಳು ಸಮಾನವಾಗಿ ಪರಿಗಣಿಸಿ ಪರಿಪಕ್ವವಾಗಬೇಕು ಎಂದು ತಾಲೂಕು ಶಿಕ್ಷಣ ಸಂಯೋಜಕ ವಸಂತ್ ಏನೆಕಲ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸಮಗ್ರ ಶಿಕ್ಷಣ, ತಾಲೂಕು ಶಿಕ್ಷಣ ಇಲಾಖೆ ಆಯೋಜನೆಯೊಂದಿಗೆ ಶುಕ್ರವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರಸ್ತಾವಿಸಿ ಮಾತನಾಡಿದರು. ಮುಖ್ಯ ಅತಿಥಿ ಕಳಂಜ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಅರ್ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗಂಗಾಧರ್ ತೋಟದಮೂಲೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ ಸವಿತಾ, ತಾಲೂಕು ಶಿಕ್ಷಕರ ಸಂಘದ ಸದಸ್ಯೆ ಹಾಗು ಪೆರುವಾಜೆ ಸಹಿಪ್ರಾ ಶಾಲಾ ಮುಖ್ಯೋಪಾಧ್ಯಾಯಿನಿ ತುಳಸಿ, ಎಸ್ಡಿಎಂಸಿ ಉಪಾಧ್ಯಕ್ಷೆ ಗೀತಾ ಉಪಸ್ಥತರಿದ್ದರು.
ಮುಖ್ಯಶಿಕ್ಷಕಿ ಮೋಹಿನಿ ಎ.ಕೆ ಸ್ವಾಗತಿಸಿ, ಹಿರಿಯ ಶಿಕ್ಷಕಿ ರೋಹಿಣಿ ವಂದಿಸಿದರು. ಶಿಕ್ಷಕಿ ರಾಣಿ ಕೆ.ಪಿ ಕಾರ್ಯಕ್ರಮ ನಿರೂಪಿಸಿದರು. ಒಟ್ಟು ಹನ್ನೆರಡು ಶಾಲೆಗಳು ಭಾಗವಹಿಸಿದ್ದು, ಇಪ್ಪತ್ತೈದು ಸ್ಪರ್ಧೆಗಳು ನಡೆಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…