Advertisement
ಅಪರಾಧ

ಮಗುವನ್ನೇ ಹೊಳೆಗೆ ಎಸೆದ ಇವಳೆಂತಹ ಕಟುಕ ತಾಯಿ…!

Share

ಮಂಗಳೂರು: ಬೆಳಗ್ಗೆ ಹೀಗೊಂದು ಮಾಹಿತಿ ಗುರುವಾರ ಬಂತು,  ಕುಂದಾಪುರ ತಾಲೂಕಿನ  ಎಡಮೊಗ್ಗೆ ಕುಮ್ಟಿಬೇರು ಎಂಬಲ್ಲಿ ರಾತ್ರಿ ತಾಯಿ ಜೊತೆಗೆ ಮಲಗಿದ್ದ ಎರಡು ಪುಟ್ಟ ಮಕ್ಕಳ ಪೈಕಿ ಒಂದು ಹೆಣ್ಣುಮಗು  ಸಾನ್ವಿಕಾಳನ್ನು ದುಷ್ಕರ್ಮಿಯೊಬ್ಬ ಕದ್ದೊಯ್ದಿದ್ದಾನೆ. ಈ ಸುದ್ದಿ ಎಲ್ಲೆಡೆ ಸಂಚಲನ ಮೂಡಿಸಿತು. ಶುಕ್ರವಾರ ಸಂಜೆಯ ಹೊತ್ತಿಗೆ ವಿಷಯ ಬಯಲಾಯಿತು, ತಾಯಿಯೇ ಹೆನ್ಣು ಮಗುವನ್ನು  ನದಿಗೆ ಎಸೆದಿದ್ದಳು..!. ಇದರ ನಡುವೆ ಇರುವ ಸತ್ಯದ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಮಗು ಕಳುವಾಗಿದೆ ಎಂಬ ವಿಷಯವನ್ನು ಗಂಭೀರವಾಗಿ ತನಿಖೆಗೆ  ಕೈಗೆತ್ತಿಕೊಂಡಿದ್ದ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್  ಅವರು ಡಿವೈಎಸ್ಪಿ ಬಿ.ಪಿ.ದಿನೇಶ್ ಕುಮಾರ್ ಅವರಿಗೆ ತನಿಖಾ ಉಸ್ತುವಾರಿ ವಹಿಸಿದ್ದರು.  ಗುರುವಾರ ರಾತ್ರಿ ಬಾಲಕಿಯ ತಾಯಿ ರೇಖಾಳನ್ನು ಶಂಕರನಾರಾಯಣ ಠಾಣೆಗೆ ಕರೆಯಿಸಿ  ವಿಚಾರಣೆ ನಡೆಸಿದ ಬಳಿಕ ಪೊಲೀಸರಿಗೆ ಕೆಲವು ಮಾಹಿತಿಗಳು ಲಭ್ಯವಾಗಿದ್ದು, ಸಾನ್ವಿಕಾ ನಾಪತ್ತೆಯ ಹಿಂದೆ ತಾಯಿ ರೇಖಾ ಕೈವಾಡ ಇರುವುದು ಸ್ಪಷ್ಟವಾಯಿತು.

ಆರಂಭದಲ್ಲಿ ಮಗು ಅಪಹರಣದ ಬಗ್ಗೆ ಮಾತನಾಡಿದ್ದ ತಾಯಿ ರೇಖಾ, ಬೆಳಗ್ಗೆ ಸುಮಾರು  ನಾಲ್ಕೂವರೆ ಗಂಟೆಗೆ ಮನೆಯ ಹಿಂಬದಿಯ ಬಾಗಿಲಲ್ಲಿ ಒಳನುಗ್ಗಿದ ಬೂದು ಬಣ್ಣದ ಅಂಗಿ ಧರಿಸಿದ ಮುಸುಕುಧಾರಿ ವ್ಯಕ್ತಿಯೊಬ್ಬ ನೇರವಾಗಿ ಮೂವರು ಮಲಗಿದ್ದಲ್ಲಿಗೆ ಬಂದು ತಾಯಿ ಜೊತೆ ಮಲಗಿದ್ದ ಹೆಣ್ಣು ಮಗು ಸಾನ್ವಿಕಾಳನ್ನು ಎತ್ತಿಕೊಂಡಿದ್ದಾನೆ ಬಳಿಕ ಮನೆ ಸಮೀಪದ ಕುಬ್ಜಾ ನದಿಯನ್ನು ದಾಟಿ ನಾಪತ್ತೆಯಾಗಿರುವುದಾಗಿ ಹೇಳಿದ್ದಳು. ಆ ವ್ಯಕ್ತಿ ಹಿಂದೆಯೇ ಹೋಗಿ ನಾವೂ ನದಿ ಸೆಳೆತಕ್ಕೆ ಸಿಲುಕಿ ಪಾರಾಗಿದ್ದೆವು ಎಂದು ಕತೆ ಹೇಳಿದ್ದಳು.

ಆ ನಂತರ ಆಕೆಯ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂತು. ಪೊಲೀಸರು ಅತ್ಯಂತ ಗಂಭೀರವಾಗಿ ಹಾಗೂ ಸೂಕ್ಷ್ಮವಾಗಿ ಈ ಪ್ರಕರಣದ ತನಿಖೆ ನಡೆಸಿದರು. ಹಲವು ಬಾರಿ ವಿಚಾರಣೆ ಮಾಡಿದರು. ದೂರು ನೀಡಿದಾಕೆಯನ್ನೇ ಆಗಾಗ ವಿಚಾರಣೆ ಮಾಡುವುದು  ಕಷ್ಟದ ಮಾತಾಗಿದ್ದರೂ ಪೊಲೀಸರು ನಾಜೂಕಿನಿಂದ ಪ್ರಕರಣದ ತನಿಖೆ ನಡೆಸುತ್ತಲೇ ಹೋದರು, ಕೊನೆಗೆ ಪೊಲೀಸರು ಪ್ರಕರಣ ಬೇಧಿಸಿ ತಾಯಿಯೇ ಮಗುವನ್ನು ಹೊಳೆಗೆ ಎಸೆದಿರುವ ಅಂಶ ಬೆಳಕಿಗೆ ಬಂದಿತು. ಶುಕ್ರವಾರ ಮಗುವಿನ ಮೃತದೇಹವೂ ಪತ್ತೆಯಾಯಿತು. ಸಾನ್ವಿಕಾ ಸ್ವತಃ ತನ್ನ ತಾಯಿಯಿಂದಲೇ ಹತ್ಯೆಯಾಗಿದ್ದಾಳೆ ಎಂದು ಪೊಲೀಸರು ಕೊನೆಗೆ ದೃಢಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಪ್ರಕರಣದ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆತ್ಯಹತ್ಯೆ ಯತ್ನವೋ ಅಥವಾ ಕೊಲೆಯೋ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಪುಟ್ಟ ಮಗು, ಒಂದೂವರೆ ವರ್ಷದ ಮಗುವನ್ನು ನಿರ್ದಯವಾಗಿ ಹೊಳೆಗೆ ಎಸೆದಿರುವ ಘಟನೆ ಎಲ್ಲರ ಮನಕಲಕಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

5 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

7 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

12 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

14 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

15 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago