ಧಾರ್ಮಿಕ

ಮಠಂತಬೆಟ್ಟು ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಧಾರ್ಮಿಕ ಪ್ರವಚನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಪುತ್ತೂರು: ಪುತ್ತೂರು ತಾಲೂಕಿನ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ನವರಾತ್ರಿಯ ಪ್ರಯುಕ್ತ ಧಾರ್ಮಿಕ ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ಚೇತನಾ ಮಾತನಾಡಿ “ದೇವಿಯನ್ನು ವಿವಿಧ ರೂಪದಲ್ಲಿ ಆರಾಧನೆ ಮಾಡಲಾಗುತ್ತದೆ. ಕುಲದೇವಿಯಾಗಿ,ಗ್ರಾಮದೇವಿಯಾಗಿ ,ಹಾಗೂ ಶಕ್ತಿ ಪೀಠಗಳಲ್ಲಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ನವರಾತ್ರಿ ಇದು ದೇವಿಯ ಉಪಾಸನೆ ಮಾಡುವ ಹಿಂದೂ ಧರ್ಮದ ಹಬ್ಬ.ನವರಾತ್ರಿಯಲ್ಲಿ ದೇವಿಯನ್ನು ಒಂಭತ್ತು ರೂಪದಲ್ಲಿ ಪೂಜಿಸಲಾಗುತ್ತದೆ.ನವರಾತ್ರಿಯ ಸಪ್ತಮಿಯ ಮೂಲಾ ನಕ್ಷತ್ರದಂದು ಪುಸ್ತಕಗಳು, ಚಿನ್ನ-ಬೆಳ್ಳಿಗಳನ್ನು ಪೂಜೆ ಮಾಡುತ್ತಾರೆ. ಹಾಗೆಯೇ ಅಷ್ಟಮಿಯ ದಿನದಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ.ನವಮಿಯಂದು ಆಯುಧ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿಯ ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ ಎಂದರು.
ನವರಾತ್ರಿ ಮೊದಲ ಮೂರು ದಿನಗಳಲ್ಲಿ ತಮೋಗುಣವನ್ನು ಕಡಿಮೆಮಾಡಲು ಮಹಾಕಾಳಿಯ,ನಂತರದ ಮೂರು ದಿನಗಳಲ್ಲಿ ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ, ಹಾಗೂ ಕೊನೆಯ ಮೂರು ದಿನಗಳಲ್ಲಿ ಸಾತ್ತ್ವಿಕತೆಯನ್ನು ವೃಧ್ದಿಸಲು ಮಹಾಸರಸ್ವತಿಯ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿ ಸಂದರ್ಭದಲ್ಲಿ ಶ್ರೀ ದೇವಿಯ ತತ್ವವು ನಿತ್ಯದ ತುಲನೆಯಲ್ಲಿ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾತ್ತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮಳಿಗೆಯನ್ನು ಹಮ್ಮಿಕೊಳ್ಳಲಾಯಿತು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

21 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

22 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 day ago