Advertisement
ಧಾರ್ಮಿಕ

ಮಠಂತಬೆಟ್ಟು ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಧಾರ್ಮಿಕ ಪ್ರವಚನ

Share
ಪುತ್ತೂರು: ಪುತ್ತೂರು ತಾಲೂಕಿನ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ನವರಾತ್ರಿಯ ಪ್ರಯುಕ್ತ ಧಾರ್ಮಿಕ ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ಚೇತನಾ ಮಾತನಾಡಿ “ದೇವಿಯನ್ನು ವಿವಿಧ ರೂಪದಲ್ಲಿ ಆರಾಧನೆ ಮಾಡಲಾಗುತ್ತದೆ. ಕುಲದೇವಿಯಾಗಿ,ಗ್ರಾಮದೇವಿಯಾಗಿ ,ಹಾಗೂ ಶಕ್ತಿ ಪೀಠಗಳಲ್ಲಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ನವರಾತ್ರಿ ಇದು ದೇವಿಯ ಉಪಾಸನೆ ಮಾಡುವ ಹಿಂದೂ ಧರ್ಮದ ಹಬ್ಬ.ನವರಾತ್ರಿಯಲ್ಲಿ ದೇವಿಯನ್ನು ಒಂಭತ್ತು ರೂಪದಲ್ಲಿ ಪೂಜಿಸಲಾಗುತ್ತದೆ.ನವರಾತ್ರಿಯ ಸಪ್ತಮಿಯ ಮೂಲಾ ನಕ್ಷತ್ರದಂದು ಪುಸ್ತಕಗಳು, ಚಿನ್ನ-ಬೆಳ್ಳಿಗಳನ್ನು ಪೂಜೆ ಮಾಡುತ್ತಾರೆ. ಹಾಗೆಯೇ ಅಷ್ಟಮಿಯ ದಿನದಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ.ನವಮಿಯಂದು ಆಯುಧ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿಯ ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ ಎಂದರು.
ನವರಾತ್ರಿ ಮೊದಲ ಮೂರು ದಿನಗಳಲ್ಲಿ ತಮೋಗುಣವನ್ನು ಕಡಿಮೆಮಾಡಲು ಮಹಾಕಾಳಿಯ,ನಂತರದ ಮೂರು ದಿನಗಳಲ್ಲಿ ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ, ಹಾಗೂ ಕೊನೆಯ ಮೂರು ದಿನಗಳಲ್ಲಿ ಸಾತ್ತ್ವಿಕತೆಯನ್ನು ವೃಧ್ದಿಸಲು ಮಹಾಸರಸ್ವತಿಯ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿ ಸಂದರ್ಭದಲ್ಲಿ ಶ್ರೀ ದೇವಿಯ ತತ್ವವು ನಿತ್ಯದ ತುಲನೆಯಲ್ಲಿ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾತ್ತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮಳಿಗೆಯನ್ನು ಹಮ್ಮಿಕೊಳ್ಳಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

3 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

4 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

10 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

10 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

12 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

13 hours ago