Advertisement
ಧಾರ್ಮಿಕ

ಮಠಂತಬೆಟ್ಟು ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಧಾರ್ಮಿಕ ಪ್ರವಚನ

Share
ಪುತ್ತೂರು: ಪುತ್ತೂರು ತಾಲೂಕಿನ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ನವರಾತ್ರಿಯ ಪ್ರಯುಕ್ತ ಧಾರ್ಮಿಕ ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ಚೇತನಾ ಮಾತನಾಡಿ “ದೇವಿಯನ್ನು ವಿವಿಧ ರೂಪದಲ್ಲಿ ಆರಾಧನೆ ಮಾಡಲಾಗುತ್ತದೆ. ಕುಲದೇವಿಯಾಗಿ,ಗ್ರಾಮದೇವಿಯಾಗಿ ,ಹಾಗೂ ಶಕ್ತಿ ಪೀಠಗಳಲ್ಲಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ನವರಾತ್ರಿ ಇದು ದೇವಿಯ ಉಪಾಸನೆ ಮಾಡುವ ಹಿಂದೂ ಧರ್ಮದ ಹಬ್ಬ.ನವರಾತ್ರಿಯಲ್ಲಿ ದೇವಿಯನ್ನು ಒಂಭತ್ತು ರೂಪದಲ್ಲಿ ಪೂಜಿಸಲಾಗುತ್ತದೆ.ನವರಾತ್ರಿಯ ಸಪ್ತಮಿಯ ಮೂಲಾ ನಕ್ಷತ್ರದಂದು ಪುಸ್ತಕಗಳು, ಚಿನ್ನ-ಬೆಳ್ಳಿಗಳನ್ನು ಪೂಜೆ ಮಾಡುತ್ತಾರೆ. ಹಾಗೆಯೇ ಅಷ್ಟಮಿಯ ದಿನದಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ.ನವಮಿಯಂದು ಆಯುಧ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿಯ ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ ಎಂದರು.
ನವರಾತ್ರಿ ಮೊದಲ ಮೂರು ದಿನಗಳಲ್ಲಿ ತಮೋಗುಣವನ್ನು ಕಡಿಮೆಮಾಡಲು ಮಹಾಕಾಳಿಯ,ನಂತರದ ಮೂರು ದಿನಗಳಲ್ಲಿ ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ, ಹಾಗೂ ಕೊನೆಯ ಮೂರು ದಿನಗಳಲ್ಲಿ ಸಾತ್ತ್ವಿಕತೆಯನ್ನು ವೃಧ್ದಿಸಲು ಮಹಾಸರಸ್ವತಿಯ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿ ಸಂದರ್ಭದಲ್ಲಿ ಶ್ರೀ ದೇವಿಯ ತತ್ವವು ನಿತ್ಯದ ತುಲನೆಯಲ್ಲಿ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾತ್ತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮಳಿಗೆಯನ್ನು ಹಮ್ಮಿಕೊಳ್ಳಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

7 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

20 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

20 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago