Advertisement
ಧಾರ್ಮಿಕ

ಮಠಂತಬೆಟ್ಟು ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಧಾರ್ಮಿಕ ಪ್ರವಚನ

Share
ಪುತ್ತೂರು: ಪುತ್ತೂರು ತಾಲೂಕಿನ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ನವರಾತ್ರಿಯ ಪ್ರಯುಕ್ತ ಧಾರ್ಮಿಕ ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ಚೇತನಾ ಮಾತನಾಡಿ “ದೇವಿಯನ್ನು ವಿವಿಧ ರೂಪದಲ್ಲಿ ಆರಾಧನೆ ಮಾಡಲಾಗುತ್ತದೆ. ಕುಲದೇವಿಯಾಗಿ,ಗ್ರಾಮದೇವಿಯಾಗಿ ,ಹಾಗೂ ಶಕ್ತಿ ಪೀಠಗಳಲ್ಲಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ನವರಾತ್ರಿ ಇದು ದೇವಿಯ ಉಪಾಸನೆ ಮಾಡುವ ಹಿಂದೂ ಧರ್ಮದ ಹಬ್ಬ.ನವರಾತ್ರಿಯಲ್ಲಿ ದೇವಿಯನ್ನು ಒಂಭತ್ತು ರೂಪದಲ್ಲಿ ಪೂಜಿಸಲಾಗುತ್ತದೆ.ನವರಾತ್ರಿಯ ಸಪ್ತಮಿಯ ಮೂಲಾ ನಕ್ಷತ್ರದಂದು ಪುಸ್ತಕಗಳು, ಚಿನ್ನ-ಬೆಳ್ಳಿಗಳನ್ನು ಪೂಜೆ ಮಾಡುತ್ತಾರೆ. ಹಾಗೆಯೇ ಅಷ್ಟಮಿಯ ದಿನದಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ.ನವಮಿಯಂದು ಆಯುಧ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿಯ ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ ಎಂದರು.
ನವರಾತ್ರಿ ಮೊದಲ ಮೂರು ದಿನಗಳಲ್ಲಿ ತಮೋಗುಣವನ್ನು ಕಡಿಮೆಮಾಡಲು ಮಹಾಕಾಳಿಯ,ನಂತರದ ಮೂರು ದಿನಗಳಲ್ಲಿ ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ, ಹಾಗೂ ಕೊನೆಯ ಮೂರು ದಿನಗಳಲ್ಲಿ ಸಾತ್ತ್ವಿಕತೆಯನ್ನು ವೃಧ್ದಿಸಲು ಮಹಾಸರಸ್ವತಿಯ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿ ಸಂದರ್ಭದಲ್ಲಿ ಶ್ರೀ ದೇವಿಯ ತತ್ವವು ನಿತ್ಯದ ತುಲನೆಯಲ್ಲಿ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾತ್ತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮಳಿಗೆಯನ್ನು ಹಮ್ಮಿಕೊಳ್ಳಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

11 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

20 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago