Advertisement
ಧಾರ್ಮಿಕ

ಮಠಂತಬೆಟ್ಟು ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಧಾರ್ಮಿಕ ಪ್ರವಚನ

Share
ಪುತ್ತೂರು: ಪುತ್ತೂರು ತಾಲೂಕಿನ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ನವರಾತ್ರಿಯ ಪ್ರಯುಕ್ತ ಧಾರ್ಮಿಕ ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ಚೇತನಾ ಮಾತನಾಡಿ “ದೇವಿಯನ್ನು ವಿವಿಧ ರೂಪದಲ್ಲಿ ಆರಾಧನೆ ಮಾಡಲಾಗುತ್ತದೆ. ಕುಲದೇವಿಯಾಗಿ,ಗ್ರಾಮದೇವಿಯಾಗಿ ,ಹಾಗೂ ಶಕ್ತಿ ಪೀಠಗಳಲ್ಲಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ನವರಾತ್ರಿ ಇದು ದೇವಿಯ ಉಪಾಸನೆ ಮಾಡುವ ಹಿಂದೂ ಧರ್ಮದ ಹಬ್ಬ.ನವರಾತ್ರಿಯಲ್ಲಿ ದೇವಿಯನ್ನು ಒಂಭತ್ತು ರೂಪದಲ್ಲಿ ಪೂಜಿಸಲಾಗುತ್ತದೆ.ನವರಾತ್ರಿಯ ಸಪ್ತಮಿಯ ಮೂಲಾ ನಕ್ಷತ್ರದಂದು ಪುಸ್ತಕಗಳು, ಚಿನ್ನ-ಬೆಳ್ಳಿಗಳನ್ನು ಪೂಜೆ ಮಾಡುತ್ತಾರೆ. ಹಾಗೆಯೇ ಅಷ್ಟಮಿಯ ದಿನದಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ.ನವಮಿಯಂದು ಆಯುಧ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿಯ ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ ಎಂದರು.
ನವರಾತ್ರಿ ಮೊದಲ ಮೂರು ದಿನಗಳಲ್ಲಿ ತಮೋಗುಣವನ್ನು ಕಡಿಮೆಮಾಡಲು ಮಹಾಕಾಳಿಯ,ನಂತರದ ಮೂರು ದಿನಗಳಲ್ಲಿ ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ, ಹಾಗೂ ಕೊನೆಯ ಮೂರು ದಿನಗಳಲ್ಲಿ ಸಾತ್ತ್ವಿಕತೆಯನ್ನು ವೃಧ್ದಿಸಲು ಮಹಾಸರಸ್ವತಿಯ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿ ಸಂದರ್ಭದಲ್ಲಿ ಶ್ರೀ ದೇವಿಯ ತತ್ವವು ನಿತ್ಯದ ತುಲನೆಯಲ್ಲಿ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾತ್ತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮಳಿಗೆಯನ್ನು ಹಮ್ಮಿಕೊಳ್ಳಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

4 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

5 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

17 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

18 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

18 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

24 hours ago