ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ನಡೆಯಲಿದೆಯೇ.? ಹೀಗೊಂದು ಸಾಧ್ಯತೆಗಳ ಬಗ್ಗೆ ಈಗ ಚರ್ಚೆ ನಡೆಯುತಿದ್ದು ನಿರೀಕ್ಷೆ ಗರಿಗೆದರಿದೆ.
ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲು ಕೆಲವೊಂದು ಮಾನದಂಡಗಳನ್ನು ಸರಕಾರ ನಿಗದಿ ಪಡಿಸಿದೆ. ಈ ಮಾನದಂಡ ಪ್ರಕಾರ ಗ್ರಾಮ ವಾಸ್ತವ್ಯ ನಡೆಸಬಹುದಾದ ಸಾಧ್ಯತಾ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ ಸೇರಿ ಜಿಲ್ಲೆಯ ಎರಡು ಗ್ರಾಮಗಳು ಸೇರಲಿದೆ ಎಂದು ಹೇಳಲಾಗಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮಕ್ಕೆ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಮಾನದಂಡ ಪ್ರಕಾರ ಸಾಧ್ಯತೆ ಇದ್ದಲ್ಲಿ ಸುಳ್ಯ ತಾಲೂಕಿಗೆ ಮುಖ್ಯಮಂತ್ರಿಗಳನ್ನು ಕರೆ ತರುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಹೇಳಿದ್ದಾರೆ.
ಒಟ್ಟಿನಲ್ಲಿ ಸುಳ್ಯ ತಾಲೂಕಿಗೆ ಸಿಎಂ ಗ್ರಾಮ ವಾಸ್ತವ್ಯ ಭಾಗ್ಯ ಒದಗಿ ಬಂದಲ್ಲಿ ಹೊಸತೊಂದು ದಾಖಲೆ ನಿರ್ಮಾಣವಾಗಲಿದೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರ್ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸುವಂತೆ ಸುಳ್ಯದ ವಕೀಲ ಧರ್ಮಪಾಲ ಕೊಯಿಂಗಾಜೆ ಇತ್ತೀಚೆಗೆ ಟ್ವಿಟ್ಟರ್ ಮೂಲಕ ಆಹ್ವಾನ ನೀಡಿ ಸಿಎಂ ಗಮನ ಸೆಳೆಯುವ ಪ್ರಯತ್ನವನ್ನು ಇತ್ತೀಚೆಗೆ ನಡೆಸಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…