ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ನಡೆಯಲಿದೆಯೇ.? ಹೀಗೊಂದು ಸಾಧ್ಯತೆಗಳ ಬಗ್ಗೆ ಈಗ ಚರ್ಚೆ ನಡೆಯುತಿದ್ದು ನಿರೀಕ್ಷೆ ಗರಿಗೆದರಿದೆ.
ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲು ಕೆಲವೊಂದು ಮಾನದಂಡಗಳನ್ನು ಸರಕಾರ ನಿಗದಿ ಪಡಿಸಿದೆ. ಈ ಮಾನದಂಡ ಪ್ರಕಾರ ಗ್ರಾಮ ವಾಸ್ತವ್ಯ ನಡೆಸಬಹುದಾದ ಸಾಧ್ಯತಾ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ ಸೇರಿ ಜಿಲ್ಲೆಯ ಎರಡು ಗ್ರಾಮಗಳು ಸೇರಲಿದೆ ಎಂದು ಹೇಳಲಾಗಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮಕ್ಕೆ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಮಾನದಂಡ ಪ್ರಕಾರ ಸಾಧ್ಯತೆ ಇದ್ದಲ್ಲಿ ಸುಳ್ಯ ತಾಲೂಕಿಗೆ ಮುಖ್ಯಮಂತ್ರಿಗಳನ್ನು ಕರೆ ತರುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಹೇಳಿದ್ದಾರೆ.
ಒಟ್ಟಿನಲ್ಲಿ ಸುಳ್ಯ ತಾಲೂಕಿಗೆ ಸಿಎಂ ಗ್ರಾಮ ವಾಸ್ತವ್ಯ ಭಾಗ್ಯ ಒದಗಿ ಬಂದಲ್ಲಿ ಹೊಸತೊಂದು ದಾಖಲೆ ನಿರ್ಮಾಣವಾಗಲಿದೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರ್ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸುವಂತೆ ಸುಳ್ಯದ ವಕೀಲ ಧರ್ಮಪಾಲ ಕೊಯಿಂಗಾಜೆ ಇತ್ತೀಚೆಗೆ ಟ್ವಿಟ್ಟರ್ ಮೂಲಕ ಆಹ್ವಾನ ನೀಡಿ ಸಿಎಂ ಗಮನ ಸೆಳೆಯುವ ಪ್ರಯತ್ನವನ್ನು ಇತ್ತೀಚೆಗೆ ನಡೆಸಿದ್ದರು.
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…