ಮಡಪ್ಪಾಡಿ: ಮಡಿಕೇರಿ ಗ್ರಾಮಸ್ಥರ ಪ್ರಧಾನ ಬೇಡಿಕೆಯಾದ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಸುಳ್ಯ ಶಾಸಕರೊಂದಿಗೆ ಸೇರಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಉಸ್ತುವಾರಿ ಸಚಿವ, ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಮಡಪ್ಪಾಡಿಯಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಅವರು, ರಸ್ತೆ ದುಸ್ಥಿತಿಯನ್ನು ನಾನೇ ಕಣ್ಣಾರೆ ಅರಿತುಕೊಂಡಿದ್ದೇನೆ. ನನ್ನ ಕ್ಷೇತ್ರದಲ್ಲಿ ತೀರಾ ಗ್ರಾಮೀಣ ಪ್ರದೇಶಗಳಲ್ಲೂ ಇಂತಹ ರಸ್ತೆಗಳಿಲ್ಲ. ಕೆ.ಎಸ್.ಈಶ್ವರಪ್ಪರೊಂದಿಗೆ ನಾನೇ ಅನುದಾನ ತರಿಸಿದ್ದೇನೆ. ಇಲ್ಲಿಗೂ ಅನುದಾನಕ್ಕೆ ಮುಖ್ಯಮಂತ್ರಿಗಳೊಂದಿಗೆ, ಈಶ್ವರಪ್ಪರೊಂದಿಗೆ ಶಾಸಕರ ಜತೆ ಸೇರಿ ಮಾತನಾಡುತ್ತೇನೆ ಎಂದು ಖಾದರ್ ಹೇಳಿದರು.
ಗ್ರಾಮ ವಾಸ್ತವ್ಯದ ಮೂಲಕ ಒಂದೇ ದಿನದಲ್ಲಿ ಮ್ಯಾಜಿಕ್ ನಡೆಯುತ್ತದೆ ಎಂದು ಗ್ರಾಮಸ್ಥರು ಭಾವಿಸಬಾರದು. ಆದರೆ ಅಧಿಕಾರಿಗಳು ಜನರ ಬೇಡಿಕೆಯ ಬೆನ್ನು ಬಿದ್ದು ಕೆಲಸ ಆಗುವಂತೆ ನೋಡಿಕೊಳ್ಳಬೇಕು ಎಂದು ಖಾದರ್ ಹೇಳಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…