ಮಡಪ್ಪಾಡಿ ಸಹಕಾರಿ ಬ್ಯಾಂಕ್ ಮಹಾಸಭೆ : ಶೇ 8.5 ಡಿವಿಡೆಂಡ್ ಘೋಷಣೆ

September 22, 2019
3:28 PM

ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.

ಸಭೆಯಲ್ಲಿ  ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror