ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.
ಸಭೆಯಲ್ಲಿ ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.
ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…