ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.
ಸಭೆಯಲ್ಲಿ ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.
ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…