ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.
ಸಭೆಯಲ್ಲಿ ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.
ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…