Advertisement
ಸುದ್ದಿಗಳು

ಮಡಪ್ಪಾಡಿ ಸಹಕಾರಿ ಬ್ಯಾಂಕ್ ಮಹಾಸಭೆ : ಶೇ 8.5 ಡಿವಿಡೆಂಡ್ ಘೋಷಣೆ

Share

ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.

ಸಭೆಯಲ್ಲಿ  ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

9 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

9 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

11 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

14 hours ago