ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.
ಸಭೆಯಲ್ಲಿ ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.
ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…