ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.
ಸಭೆಯಲ್ಲಿ ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.
ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…