Advertisement
ಸುದ್ದಿಗಳು

ಮಡಿಕೇರಿಯಲ್ಲಿ ಇಎನ್‍ಟಿ ತಜ್ಞರ ರಾಜ್ಯ ಸಮ್ಮೇಳನ : ಸೆ.27 ರಂದು ಚಾಲನೆ

Share

ಮಡಿಕೇರಿ : ಕಿವಿ, ಮೂಗು ಮತ್ತು ಗಂಟಲು (ಇಎನ್‍ಟಿ) ತಜ್ಞರ ಮೂರು ದಿನಗಳ ರಾಜ್ಯ ಮಟ್ಟದ 37ನೇ ಸಮ್ಮೇಳನ ಸೆ.27ರಿಂದ 29ರವರೆಗೆ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ (ಮೆಡಿಕಲ್ ಕಾಲೇಜು) ಸಭಾಂಗಣದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಇಎನ್‍ಟಿ ಶಶ್ತ್ರಚಿಕಿತ್ಸಕರ ಸಂಘದ ಕೊಡಗು ಘಟಕದ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಅವರು, ಇಎನ್‍ಟಿ ಶಸ್ತ್ರಚಿಕಿತ್ಸಕರ ಸಂಘಟನೆಯ ಕೊಡಗು ಮತ್ತು ಕರ್ನಾಟಕ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಇದೇ ಪ್ರಥಮ ಬಾರಿಗೆ ಕೊಡಗಿನಲ್ಲಿ ರಾಜ್ಯ ಮಟ್ಟದ ಸಮ್ಮೇಳನ ನಡೆಯಲಿದೆ ಎಂದರು. ರಾಜ್ಯದ ವಿವಿಧೆಡೆಯ ಸುಮಾರು 500ಕ್ಕೂ ಅಧಿಕ ಮಂದಿ ವೈದ್ಯರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ನುರಿತ ಇಎನ್‍ಟಿ ತಜ್ಞರಿಂದ ಉಪನ್ಯಾಸ, ಆಹ್ವಾನಿತ ಮಾತುಕತೆಗಳು, ಚರ್ಚೆಗಳು, ವಿಚಾರ ಸಂಕಿರಣ ಮತ್ತು ಪ್ರಾಯೋಗಿಕ ಕಾರ್ಯಾಗಾರಗಳು ನಡೆಯಲಿದ್ದು, ಕರ್ನಾಟಕ ಮಾತ್ರವಲ್ಲದೆ, ಹೊರ ರಾಜ್ಯಗಳ ಇಎನ್‍ಟಿ ಶಸ್ತ್ರಚಿಕಿತ್ಸಕರೂ ಉಪನ್ಯಾಸಗಳನ್ನು ನೀಡಲಿದ್ದಾರೆ. ಮುಖ್ಯವಾಗಿ ಇಎನ್‍ಟಿ ಶಸತ್ರಚಿಕಿತ್ಸಕರ ಸಂಘಟನೆಯ ಅಧ್ಯಕ್ಷ ಸತ್ಯಪ್ರಕಾಶ್, ರಾಜೀವಗಾಂಧಿ ವೈದ್ಯಕೀಯ ವಿವಿಯ ಸಚ್ಚಿದಾನಂದ ಮತ್ತಿತರರು ಮಾಹಿತಿ ನೀಡಲಿದ್ದಾರೆ. ಪ್ರಾಯೋಗಿಕವಾಗಿ ಯುವ ಶಸ್ತ್ರಚಿಕಿತ್ಸಕರಿಗೆ ತರಬೇತಿ ನೀಡುವ ಉದ್ದೇಶದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ನಾಲ್ಕು ಪ್ರಾಯೋಗಿಕ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಅಲ್ಲದೆ ಮೆಡಿಕೋ-ಲೀಗಲ್ ಪ್ಯಾನಲ್ ಕೂಡ ನಡೆಯಲಿದ್ದು, ಇದರಲ್ಲಿ ಖ್ಯಾತ ವೈದ್ಯರು, ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ನುರಿತ ವಕೀಲರು ಭಾಗವಹಿಸಿ ಇಂದಿನ ವೈದ್ಯಕೀಯ ವೃತ್ತಿಯಲ್ಲಿ ಕಾನೂನು ಅಂಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಡಾ.ಮೋಹನ್ ಅಪ್ಪಾಜಿ ವಿವರಿಸಿದರು.

ಗೋಷ್ಠಿಯಲ್ಲಿ ಹಾಜರಿದ್ದ ಇಎನ್‍ಟಿ ಶಸ್ತ್ರಚಿಕಿತ್ಸಕರ ಸಂಘಟನೆಯ ಕೊಡಗು ಜಿಲ್ಲಾ ಕಾರ್ಯದರ್ಶಿ ಡಾ. ಶ್ವೇತಾ ಅವರು  ಈ ಸಮ್ಮೇಳನಕ್ಕೆ ಸಮಾನಾಂತರವಾಗಿ ಸೆ.28ರಂದು ಶ್ರವಣ ಮತ್ತು ವಾಕ್ ಭಾಷಾ ತಜ್ಞರುಗಳಿಗಾಗಿ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.
ವೃತ್ತಿ ಜೀವನದಲ್ಲಿ ಉತ್ತುಂಗಕ್ಕೇರಿ ಛಾಪು ಮೂಡಿಸಿರುವ ಖ್ಯಾತ ವೈದ್ಯರು ಮತ್ತು ಸ್ಥಳೀಯ ಕ್ರೀಡಾಪಟುಗಳನ್ನು ಸೆ.27ರಂದು ಸನ್ಮಾನಿಸಲಾಗುವುದು. ಜಿಲ್ಲೆಯ ಪ್ರಥಮ ಇಎನ್‍ಟಿ ತಜ್ಞ ಡಾ. ಸಿ.ಎಂ.ದೇವಯ್ಯ, ಕ್ರೀಡಾಪಟು ಅರ್ಜುನ್ ದೇವಯ್ಯ ಸೇರಿದಂತೆ ಹಲವು ಮಂದಿ ಸನ್ಮಾನ ಸ್ವೀಕರಿಸಲಿದ್ದಾರೆ ಎಂದು ಡಾ. ಅಚ್ಚಯ್ಯ ಅವರು ತಿಳಿಸಿದರು .
ಸಮ್ಮೇಳನದ ಕುರಿತ ಹೆಚ್ಚಿನ ಮಾಹಿತಿಗಾಗಿ ಡಾ. ಮೋಹನ್ ಅಪ್ಪಾಜಿ (9845471569) ಡಾ. ಶ್ವೇತಾ (9535659298) ಡಾ. ವಿನಯ್ ಎಸ್.ಆರ್. (9481500743) ಅವರನ್ನು ಸಂಪರ್ಕಿಸಬಹುದಾಗಿದೆ. ಸುದ್ದಿಗೋಷ್ಠಿಯಲ್ಲಿ ಡಾ. ಪಂಚಮ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 hour ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

12 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

12 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 day ago