ಮಡಿಕೇರಿ: ಕಾರ್ಗಿಲ್ನ್ನು ಅತಿಕ್ರಮಿಸಿಕೊಂಡ ಪಾಕಿಸ್ತಾನವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ಭಾರತೀಯ ಸೈನ್ಯದ ವೀರೋಚಿತ ಗೆಲುವಿಗೆ ಎರಡು ದಶಕಗಳು ಸಂದ ಅಪೂರ್ವ ದಿನವನ್ನು, ನಗರದ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ಹೃದಯ ಸ್ಪರ್ಶಿಯಾಗಿ ಆಚರಿಸಲಾಯಿತು.
ಭಾರತೀಯರು ಮರೆಯಲಾಗದ ಕಾರ್ಗಿಲ್ ಯುದ್ಧ 1999ರ ಮೇ ತಿಂಗಳಿನಲ್ಲಿ ಆರಂಭಗೊಂಡು 74 ದಿನಗಳ ಕಾಲ ನಡೆದು, ಭಾರತೀಯ ಸೈನ್ಯ ತನ್ನ ಅಸಾಮಾನ್ಯ ಶೌರ್ಯ, ಪರಾಕ್ರಮಗಳ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಕಲಿಸಿತ್ತು. ಈ ಹಂತದಲ್ಲಿ ಮಡಿದ ಭಾರತದ ವೀರ ಯೋಧರಿಗೆ ನಗರದ ಯುದ್ಧ ಸ್ಮಾರಕದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆಯ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಾನರರಿ ಸುಬೇದಾರ್ ಮೇಜರ್ ಆನಂದ್ ಅವರು, ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸೈನಿಕ ಕಲ್ಯಾಣ ಮಂಡಳಿ ಜಂಟಿ ನಿರ್ದೇಶಕರಾದ ಗೀತಾ ಶೆಟ್ಟಿ, ಮೇಜರ್ ಒ.ಎಸ್.ಚಿಂಗಪ್ಪ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ, ನಗರಸಭಾ ಮಾಜಿ ಸದಸ್ಯರುಗಳಾದ ಅನಿತಾ ಪೂವಯ್ಯ, ಟಿ.ಎಸ್. ಪ್ರಕಾಶ್, ಬಿಜೆಪಿ ನಗರ ಕಾರ್ಯದರ್ಶಿ ಮನು ಮಂಜುನಾಥ್, ಕಡಗದಾಳು ಗಣೇಶ್, ಬಿ.ಎಂ. ರವಿ, ಅರುಣ್ ಕುಮಾರ್, ಬಜರಂಗ ದಳದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಪುಷ್ಪ ನಮನ ಸಲ್ಲಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ಸೈನಿಕ ಕಲ್ಯಾಣ ಮಂಡಳಿಯ ಜಂಟಿ ನಿರ್ದೇಶಕಿ ಗೀತಾ ಶೆಟ್ಟಿ ಈ ಸಂದರ್ಭ ಮಾತನಾಡಿ, ಭಾರತೀಯ ಸೈನ್ಯವು ಎಂತಹುದ್ದೇ ಯುದ್ಧವನ್ನು ಸಮರ್ಥವಾಗಿ ಎದುರಿಸುವ ಅಪ್ರತಿಮ ಶಕ್ತಿ ಸಾಮಥ್ರ್ಯವನ್ನು ಹೊಂದಿದೆಯೆಂದು ಹೆಮ್ಮೆ ವ್ಯಕ್ತಪಡಿಸಿದರು.
ಹಿಂದೂ ಪರ ಸಂಘಟನೆಯ ಚಿ.ನಾ.ಸೋಮೇಶ್ ದಿನದ ಮಹತ್ವದ ಕುರಿತು ಮಾತನಾಡಿ, ಹಿಮಚ್ಛಾದಿತ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಭಾರತದ 527 ವೀರ ಯೋಧರು ಪ್ರಾಣಾರ್ಪಣೆಗೈದಿದ್ದು, ಅವರಲ್ಲಿ ಕೊಡಗಿನ ವೀರಯೋಧರೂ ಸೇರಿದ್ದಾರೆ ಎಂದು ತಿಳಿಸಿದರು.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…