Advertisement
ಸುದ್ದಿಗಳು

ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮ ಯೋಧರಿಗೆ ನಮನ

Share

ಮಡಿಕೇರಿ: ಕಾರ್ಗಿಲ್‍ನ್ನು ಅತಿಕ್ರಮಿಸಿಕೊಂಡ ಪಾಕಿಸ್ತಾನವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ಭಾರತೀಯ ಸೈನ್ಯದ ವೀರೋಚಿತ ಗೆಲುವಿಗೆ ಎರಡು ದಶಕಗಳು ಸಂದ ಅಪೂರ್ವ ದಿನವನ್ನು, ನಗರದ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ಹೃದಯ ಸ್ಪರ್ಶಿಯಾಗಿ ಆಚರಿಸಲಾಯಿತು.

ಭಾರತೀಯರು ಮರೆಯಲಾಗದ ಕಾರ್ಗಿಲ್ ಯುದ್ಧ 1999ರ ಮೇ ತಿಂಗಳಿನಲ್ಲಿ ಆರಂಭಗೊಂಡು 74 ದಿನಗಳ ಕಾಲ ನಡೆದು, ಭಾರತೀಯ ಸೈನ್ಯ ತನ್ನ ಅಸಾಮಾನ್ಯ ಶೌರ್ಯ, ಪರಾಕ್ರಮಗಳ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಕಲಿಸಿತ್ತು. ಈ ಹಂತದಲ್ಲಿ ಮಡಿದ ಭಾರತದ ವೀರ ಯೋಧರಿಗೆ ನಗರದ ಯುದ್ಧ ಸ್ಮಾರಕದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆಯ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಾನರರಿ ಸುಬೇದಾರ್ ಮೇಜರ್ ಆನಂದ್ ಅವರು, ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸೈನಿಕ ಕಲ್ಯಾಣ ಮಂಡಳಿ ಜಂಟಿ ನಿರ್ದೇಶಕರಾದ ಗೀತಾ ಶೆಟ್ಟಿ, ಮೇಜರ್ ಒ.ಎಸ್.ಚಿಂಗಪ್ಪ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ, ನಗರಸಭಾ ಮಾಜಿ ಸದಸ್ಯರುಗಳಾದ ಅನಿತಾ ಪೂವಯ್ಯ, ಟಿ.ಎಸ್. ಪ್ರಕಾಶ್, ಬಿಜೆಪಿ ನಗರ ಕಾರ್ಯದರ್ಶಿ ಮನು ಮಂಜುನಾಥ್, ಕಡಗದಾಳು ಗಣೇಶ್, ಬಿ.ಎಂ. ರವಿ, ಅರುಣ್ ಕುಮಾರ್, ಬಜರಂಗ ದಳದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಪುಷ್ಪ ನಮನ ಸಲ್ಲಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಸೈನಿಕ ಕಲ್ಯಾಣ ಮಂಡಳಿಯ ಜಂಟಿ ನಿರ್ದೇಶಕಿ ಗೀತಾ ಶೆಟ್ಟಿ ಈ ಸಂದರ್ಭ ಮಾತನಾಡಿ, ಭಾರತೀಯ ಸೈನ್ಯವು ಎಂತಹುದ್ದೇ ಯುದ್ಧವನ್ನು ಸಮರ್ಥವಾಗಿ ಎದುರಿಸುವ ಅಪ್ರತಿಮ ಶಕ್ತಿ ಸಾಮಥ್ರ್ಯವನ್ನು ಹೊಂದಿದೆಯೆಂದು ಹೆಮ್ಮೆ ವ್ಯಕ್ತಪಡಿಸಿದರು.
ಹಿಂದೂ ಪರ ಸಂಘಟನೆಯ ಚಿ.ನಾ.ಸೋಮೇಶ್ ದಿನದ ಮಹತ್ವದ ಕುರಿತು ಮಾತನಾಡಿ, ಹಿಮಚ್ಛಾದಿತ ಕಾರ್ಗಿಲ್‍ನಲ್ಲಿ ನಡೆದ ಯುದ್ಧದಲ್ಲಿ ಭಾರತದ 527 ವೀರ ಯೋಧರು ಪ್ರಾಣಾರ್ಪಣೆಗೈದಿದ್ದು, ಅವರಲ್ಲಿ ಕೊಡಗಿನ ವೀರಯೋಧರೂ ಸೇರಿದ್ದಾರೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

3 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

6 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

10 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago