Advertisement
ಸುದ್ದಿಗಳು

ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮ ಯೋಧರಿಗೆ ನಮನ

Share

ಮಡಿಕೇರಿ: ಕಾರ್ಗಿಲ್‍ನ್ನು ಅತಿಕ್ರಮಿಸಿಕೊಂಡ ಪಾಕಿಸ್ತಾನವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ಭಾರತೀಯ ಸೈನ್ಯದ ವೀರೋಚಿತ ಗೆಲುವಿಗೆ ಎರಡು ದಶಕಗಳು ಸಂದ ಅಪೂರ್ವ ದಿನವನ್ನು, ನಗರದ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ಹೃದಯ ಸ್ಪರ್ಶಿಯಾಗಿ ಆಚರಿಸಲಾಯಿತು.

ಭಾರತೀಯರು ಮರೆಯಲಾಗದ ಕಾರ್ಗಿಲ್ ಯುದ್ಧ 1999ರ ಮೇ ತಿಂಗಳಿನಲ್ಲಿ ಆರಂಭಗೊಂಡು 74 ದಿನಗಳ ಕಾಲ ನಡೆದು, ಭಾರತೀಯ ಸೈನ್ಯ ತನ್ನ ಅಸಾಮಾನ್ಯ ಶೌರ್ಯ, ಪರಾಕ್ರಮಗಳ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಕಲಿಸಿತ್ತು. ಈ ಹಂತದಲ್ಲಿ ಮಡಿದ ಭಾರತದ ವೀರ ಯೋಧರಿಗೆ ನಗರದ ಯುದ್ಧ ಸ್ಮಾರಕದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆಯ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಾನರರಿ ಸುಬೇದಾರ್ ಮೇಜರ್ ಆನಂದ್ ಅವರು, ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸೈನಿಕ ಕಲ್ಯಾಣ ಮಂಡಳಿ ಜಂಟಿ ನಿರ್ದೇಶಕರಾದ ಗೀತಾ ಶೆಟ್ಟಿ, ಮೇಜರ್ ಒ.ಎಸ್.ಚಿಂಗಪ್ಪ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ, ನಗರಸಭಾ ಮಾಜಿ ಸದಸ್ಯರುಗಳಾದ ಅನಿತಾ ಪೂವಯ್ಯ, ಟಿ.ಎಸ್. ಪ್ರಕಾಶ್, ಬಿಜೆಪಿ ನಗರ ಕಾರ್ಯದರ್ಶಿ ಮನು ಮಂಜುನಾಥ್, ಕಡಗದಾಳು ಗಣೇಶ್, ಬಿ.ಎಂ. ರವಿ, ಅರುಣ್ ಕುಮಾರ್, ಬಜರಂಗ ದಳದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಪುಷ್ಪ ನಮನ ಸಲ್ಲಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಸೈನಿಕ ಕಲ್ಯಾಣ ಮಂಡಳಿಯ ಜಂಟಿ ನಿರ್ದೇಶಕಿ ಗೀತಾ ಶೆಟ್ಟಿ ಈ ಸಂದರ್ಭ ಮಾತನಾಡಿ, ಭಾರತೀಯ ಸೈನ್ಯವು ಎಂತಹುದ್ದೇ ಯುದ್ಧವನ್ನು ಸಮರ್ಥವಾಗಿ ಎದುರಿಸುವ ಅಪ್ರತಿಮ ಶಕ್ತಿ ಸಾಮಥ್ರ್ಯವನ್ನು ಹೊಂದಿದೆಯೆಂದು ಹೆಮ್ಮೆ ವ್ಯಕ್ತಪಡಿಸಿದರು.
ಹಿಂದೂ ಪರ ಸಂಘಟನೆಯ ಚಿ.ನಾ.ಸೋಮೇಶ್ ದಿನದ ಮಹತ್ವದ ಕುರಿತು ಮಾತನಾಡಿ, ಹಿಮಚ್ಛಾದಿತ ಕಾರ್ಗಿಲ್‍ನಲ್ಲಿ ನಡೆದ ಯುದ್ಧದಲ್ಲಿ ಭಾರತದ 527 ವೀರ ಯೋಧರು ಪ್ರಾಣಾರ್ಪಣೆಗೈದಿದ್ದು, ಅವರಲ್ಲಿ ಕೊಡಗಿನ ವೀರಯೋಧರೂ ಸೇರಿದ್ದಾರೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

7 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

9 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

15 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago