ಮಡಿಕೇರಿಯಲ್ಲಿ ತುಳುವೆರ ಜನಪದ ಕೂಟದ ಸಭೆ

June 24, 2019
9:16 PM

ಮಡಿಕೇರಿ :  ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿಯ ಪ್ರಮುಖರ ಸಭೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರ ಕ್ಷೇಮಾಭಿವೃದ್ಧಿಗೆ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಜಿಲ್ಲೆಯಲ್ಲಿ ತುಳು ಬಾಂಧವರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲಾ ಸಮಿತಿ ಸೇರಿದಂತೆ ಮೂರು ತಾಲೂಕು ಸಮಿತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪುನರ್ ರಚಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದರು.

ಜಿಲ್ಲಾ ಗೌರವ ಸಲಹೆಗಾರ ಬಿ.ಬಿ.ಐತ್ತಪ್ಪ ರೈ , ಜಿಲ್ಲಾ ಸಂಘದ ಸ್ಥಾಪಕ ಸಲಹೆಗಾರ ಕೆ.ಆರ್.ಬಾಲಕೃಷ್ಣ ರೈ , ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದರಘು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮಾತನಾಡಿದರು.
ಸಭೆಯಲ್ಲಿ ಮಂಗಳೂರಿನ ಹರೀಶ್ ಆಳ್ವ ಸಂಘಟನೆಯನ್ನು ಬಲ ಪಡಿಸಲು ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು.

ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಸಂಧ್ಯಾ ಗಣೇಶ್ ರೈ, ಮಡಿಕೇರಿ ತಾಲೂಕು ನಿರ್ದೇಶಕರುಗಳಾದ ಆರ್.ಬಿ.ರವಿ, ಲೀಲಾ ಶೇಷಮ್ಮ, ಮಡಿಕೇರಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ತಾಲೂಕು ಸದಸ್ಯ ಜಗದೀಶ್ ಆಚಾರ್ಯ ಸೇರಿದಂತೆ ಹಲವರು ಸೂಕ್ತ ಸಲಹೆಗಳನ್ನು ನೀಡಿ ಗಮನ ಸೆಳೆದರು. ಪಿ.ಎಂ.ರವಿ ನಿರೂಪಿಸಿ, ವಂದಿಸಿದರು. ಫೋಟೋ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror