ಮಡಿಕೇರಿ : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿಯ ಪ್ರಮುಖರ ಸಭೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರ ಕ್ಷೇಮಾಭಿವೃದ್ಧಿಗೆ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಜಿಲ್ಲೆಯಲ್ಲಿ ತುಳು ಬಾಂಧವರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲಾ ಸಮಿತಿ ಸೇರಿದಂತೆ ಮೂರು ತಾಲೂಕು ಸಮಿತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪುನರ್ ರಚಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದರು.
ಜಿಲ್ಲಾ ಗೌರವ ಸಲಹೆಗಾರ ಬಿ.ಬಿ.ಐತ್ತಪ್ಪ ರೈ , ಜಿಲ್ಲಾ ಸಂಘದ ಸ್ಥಾಪಕ ಸಲಹೆಗಾರ ಕೆ.ಆರ್.ಬಾಲಕೃಷ್ಣ ರೈ , ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದರಘು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮಾತನಾಡಿದರು.
ಸಭೆಯಲ್ಲಿ ಮಂಗಳೂರಿನ ಹರೀಶ್ ಆಳ್ವ ಸಂಘಟನೆಯನ್ನು ಬಲ ಪಡಿಸಲು ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು.
ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಸಂಧ್ಯಾ ಗಣೇಶ್ ರೈ, ಮಡಿಕೇರಿ ತಾಲೂಕು ನಿರ್ದೇಶಕರುಗಳಾದ ಆರ್.ಬಿ.ರವಿ, ಲೀಲಾ ಶೇಷಮ್ಮ, ಮಡಿಕೇರಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ತಾಲೂಕು ಸದಸ್ಯ ಜಗದೀಶ್ ಆಚಾರ್ಯ ಸೇರಿದಂತೆ ಹಲವರು ಸೂಕ್ತ ಸಲಹೆಗಳನ್ನು ನೀಡಿ ಗಮನ ಸೆಳೆದರು. ಪಿ.ಎಂ.ರವಿ ನಿರೂಪಿಸಿ, ವಂದಿಸಿದರು. ಫೋಟೋ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…