ಮಡಿಕೇರಿ : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿಯ ಪ್ರಮುಖರ ಸಭೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರ ಕ್ಷೇಮಾಭಿವೃದ್ಧಿಗೆ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಜಿಲ್ಲೆಯಲ್ಲಿ ತುಳು ಬಾಂಧವರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲಾ ಸಮಿತಿ ಸೇರಿದಂತೆ ಮೂರು ತಾಲೂಕು ಸಮಿತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪುನರ್ ರಚಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದರು.
ಜಿಲ್ಲಾ ಗೌರವ ಸಲಹೆಗಾರ ಬಿ.ಬಿ.ಐತ್ತಪ್ಪ ರೈ , ಜಿಲ್ಲಾ ಸಂಘದ ಸ್ಥಾಪಕ ಸಲಹೆಗಾರ ಕೆ.ಆರ್.ಬಾಲಕೃಷ್ಣ ರೈ , ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದರಘು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮಾತನಾಡಿದರು.
ಸಭೆಯಲ್ಲಿ ಮಂಗಳೂರಿನ ಹರೀಶ್ ಆಳ್ವ ಸಂಘಟನೆಯನ್ನು ಬಲ ಪಡಿಸಲು ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು.
ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಸಂಧ್ಯಾ ಗಣೇಶ್ ರೈ, ಮಡಿಕೇರಿ ತಾಲೂಕು ನಿರ್ದೇಶಕರುಗಳಾದ ಆರ್.ಬಿ.ರವಿ, ಲೀಲಾ ಶೇಷಮ್ಮ, ಮಡಿಕೇರಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ತಾಲೂಕು ಸದಸ್ಯ ಜಗದೀಶ್ ಆಚಾರ್ಯ ಸೇರಿದಂತೆ ಹಲವರು ಸೂಕ್ತ ಸಲಹೆಗಳನ್ನು ನೀಡಿ ಗಮನ ಸೆಳೆದರು. ಪಿ.ಎಂ.ರವಿ ನಿರೂಪಿಸಿ, ವಂದಿಸಿದರು. ಫೋಟೋ
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…